24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

ತೆಂಕಕಾರಂದೂರು ಗ್ರಾಮದ ಹಿಬರೋಡಿ ಅಶ್ವಥ ಪಲ್ಕೆ ಎಂಬಲ್ಲಿ ಬದ್ಯಾರು- ಮುಂಡೂರು ಸಾರ್ವಜನಿಕ ರಸ್ತೆಯಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಜೂ. 9ರಂದು ಸಂಜೆ ನಡೆದಿದೆ.

ಘಟನೆ ವಿವರ: ಜೂ. 09 ರಂದು ಸಂಜೆ ತೆಂಕಕಾರಂದೂರು ಗ್ರಾಮದ ಹಿಬರೋಡಿ ಅಶ್ವಥ ಪಲ್ಕೆ ಎಂಬಲ್ಲಿ ಆಟೋ ರಿಕ್ಷಾವನ್ನು ಅದರ ಚಾಲಕ ಜಿನೇಂದ್ರ ಕುಮಾರ್ ಎಂಬವರು ಬದ್ಯಾರು ಕಡೆಯಿಂದ ಮುಂಡೂರು ಕಡೆಗೆ ತಿರುವು ರಸ್ತೆಯಲ್ಲಿ ರಾಂಗ್ ಸೈಡಿಗೆ ಚಲಾಯಿಸಿ ಮುಂಡೂರು ಕಡೆಯಿಂದ ಬರುತ್ತಿದ್ದ ಬೈಕ್ ಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಜಯಂತ ನಾಯ್ಕ್ ರವರು ಬೈಕ್ ನೊಂದಿಗೆ ರಸ್ತೆಗೆ ಬಿದ್ದು ಕಾಲಿಗೆ ಗಾಯಗಳಾಗಿ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವುದಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Related posts

    ಅನಘ ಮನೆಯ ಕಳ್ಳತನ ಪ್ರಕರಣ ಶೀಘ್ರವಾಗಿ ಭೇದಿಸುವಂತೆ ವೇಣೂರು ಪೊಲೀಸ್ ಠಾಣೆಗೆ ಕುತ್ಲೂರು ಗ್ರಾಮದ ಮಹಿಳೆಯರಿಂದ ಮನವಿ

    Suddi Udaya

    ಸುಲ್ಕೇರಿಮೊಗ್ರು, ಬಿಲ್ಲವ ಸಂಘದ ಸದಸ್ಯರಿಂದ ಶಿವಗಿರಿ ತೀರ್ಥಯಾತ್ರೆ

    Suddi Udaya

    ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನಿಗೆ ಸಂಕಷ್ಟ

    Suddi Udaya

    ಮೇಲಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ

    Suddi Udaya

    ಪುಂಜಾಲಕಟ್ಟೆ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ಬಾಲಕರ ತಂಡಕ್ಕೆ ಪ್ರಶಸ್ತಿ

    Suddi Udaya

    ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

    Suddi Udaya
    error: Content is protected !!