24.4 C
ಪುತ್ತೂರು, ಬೆಳ್ತಂಗಡಿ
June 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

ಬೆಳ್ತಂಗಡಿ: ಚಿತ್ರದುರ್ಗದಿಂದ ಬಂದು ಬೆಳ್ತಂಗಡಿ ಮೂಲಕ ಬಲ್ಲಾಳರಾಯನ ದುರ್ಗಕ್ಕೆ ಚಾರಣಕ್ಕೆ ತೆರಳಿದ್ದ 10 ತಂಡ ಬಲ್ಲಾಳರಾಯನ ದುರ್ಗಾದ ಕಾಡಿನಲ್ಲಿ ಸಿಲುಕಿದ ಘಟನೆ ಜೂ. 9 ರಂದು ತಡರಾತ್ರಿಯಲ್ಲಿ ನಡೆದಿದೆ.

ಜೂ. 9 ರಂದು ಬೆಳಗ್ಗೆ, ಬೆಳ್ತಂಗಡಿಗೆ ಬಂದು ಅರಣ್ಯದ ಮೂಲಕ ಟ್ರೆಕ್ಕಿಂಗ್ ಆರಂಭಿಸಿದ ಐವರು ಯುವಕರು ಹಾಗೂ ಐದು ಮಂದಿ ಯುವತಿಯರ ತಂಡ ಚಾರಣಿಗರು ರಾತ್ರಿಯ ವೇಳೆ ದಟ್ಟ ಕಾಡಿನ ನಡುವೆ ಸಿಲುಕಿಕೊಂಡಿದ್ದು, ಬಳಿಕ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಗೆ ಕರೆ ಮಾಡಿ ಸಹಾಯ ಮಾಡುವಂತೆ ಕೋರಿದ್ದಾರೆ ಎನ್ನಲಾಗಿದೆ.

ನಂತರ ಕಾರ್ಯ ಪ್ರವೃತ್ತರಾದ ಚಿಕ್ಕಮಗಳೂರು ಪೊಲೀಸರು, ಅರಣ್ಯ ಸಿಬ್ಬಂದಿ ಸೇರಿದಂತೆ ಸ್ಥಳೀಯರ ಜೊತೆ ಅರಣ್ಯದಲ್ಲಿ ಹುಡುಕಾಟ ನಡೆಸಿದ್ದು ತಡ ರಾತ್ರಿಯ ವೇಳೆ ಇವರನ್ನು ದಟ್ಟ ಅರಣ್ಯದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು ಬೆಳಗಿನ ಜಾವ ಇವರನ್ನು ಅರಣ್ಯದಿಂದ ಸುರಕ್ಷಿತವಾಗಿ ಹೊರತರಲಾಗಿದೆ.

Related posts

ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!