22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

ಬೆಳ್ತಂಗಡಿ: ಚಿತ್ರದುರ್ಗದಿಂದ ಬಂದು ಬೆಳ್ತಂಗಡಿ ಮೂಲಕ ಬಲ್ಲಾಳರಾಯನ ದುರ್ಗಕ್ಕೆ ಚಾರಣಕ್ಕೆ ತೆರಳಿದ್ದ 10 ತಂಡ ಬಲ್ಲಾಳರಾಯನ ದುರ್ಗಾದ ಕಾಡಿನಲ್ಲಿ ಸಿಲುಕಿದ ಘಟನೆ ಜೂ. 9 ರಂದು ತಡರಾತ್ರಿಯಲ್ಲಿ ನಡೆದಿದೆ.

ಜೂ. 9 ರಂದು ಬೆಳಗ್ಗೆ, ಬೆಳ್ತಂಗಡಿಗೆ ಬಂದು ಅರಣ್ಯದ ಮೂಲಕ ಟ್ರೆಕ್ಕಿಂಗ್ ಆರಂಭಿಸಿದ ಐವರು ಯುವಕರು ಹಾಗೂ ಐದು ಮಂದಿ ಯುವತಿಯರ ತಂಡ ಚಾರಣಿಗರು ರಾತ್ರಿಯ ವೇಳೆ ದಟ್ಟ ಕಾಡಿನ ನಡುವೆ ಸಿಲುಕಿಕೊಂಡಿದ್ದು, ಬಳಿಕ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಗೆ ಕರೆ ಮಾಡಿ ಸಹಾಯ ಮಾಡುವಂತೆ ಕೋರಿದ್ದಾರೆ ಎನ್ನಲಾಗಿದೆ.

ನಂತರ ಕಾರ್ಯ ಪ್ರವೃತ್ತರಾದ ಚಿಕ್ಕಮಗಳೂರು ಪೊಲೀಸರು, ಅರಣ್ಯ ಸಿಬ್ಬಂದಿ ಸೇರಿದಂತೆ ಸ್ಥಳೀಯರ ಜೊತೆ ಅರಣ್ಯದಲ್ಲಿ ಹುಡುಕಾಟ ನಡೆಸಿದ್ದು ತಡ ರಾತ್ರಿಯ ವೇಳೆ ಇವರನ್ನು ದಟ್ಟ ಅರಣ್ಯದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು ಬೆಳಗಿನ ಜಾವ ಇವರನ್ನು ಅರಣ್ಯದಿಂದ ಸುರಕ್ಷಿತವಾಗಿ ಹೊರತರಲಾಗಿದೆ.

Related posts

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

Suddi Udaya

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ದೀಪ್ತಿ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!