25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

ಬೆಳ್ತಂಗಡಿ: ಚಿತ್ರದುರ್ಗದಿಂದ ಬಂದು ಬೆಳ್ತಂಗಡಿ ಮೂಲಕ ಬಲ್ಲಾಳರಾಯನ ದುರ್ಗಕ್ಕೆ ಚಾರಣಕ್ಕೆ ತೆರಳಿದ್ದ 10 ತಂಡ ಬಲ್ಲಾಳರಾಯನ ದುರ್ಗಾದ ಕಾಡಿನಲ್ಲಿ ಸಿಲುಕಿದ ಘಟನೆ ಜೂ. 9 ರಂದು ತಡರಾತ್ರಿಯಲ್ಲಿ ನಡೆದಿದೆ.

ಜೂ. 9 ರಂದು ಬೆಳಗ್ಗೆ, ಬೆಳ್ತಂಗಡಿಗೆ ಬಂದು ಅರಣ್ಯದ ಮೂಲಕ ಟ್ರೆಕ್ಕಿಂಗ್ ಆರಂಭಿಸಿದ ಐವರು ಯುವಕರು ಹಾಗೂ ಐದು ಮಂದಿ ಯುವತಿಯರ ತಂಡ ಚಾರಣಿಗರು ರಾತ್ರಿಯ ವೇಳೆ ದಟ್ಟ ಕಾಡಿನ ನಡುವೆ ಸಿಲುಕಿಕೊಂಡಿದ್ದು, ಬಳಿಕ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಗೆ ಕರೆ ಮಾಡಿ ಸಹಾಯ ಮಾಡುವಂತೆ ಕೋರಿದ್ದಾರೆ ಎನ್ನಲಾಗಿದೆ.

ನಂತರ ಕಾರ್ಯ ಪ್ರವೃತ್ತರಾದ ಚಿಕ್ಕಮಗಳೂರು ಪೊಲೀಸರು, ಅರಣ್ಯ ಸಿಬ್ಬಂದಿ ಸೇರಿದಂತೆ ಸ್ಥಳೀಯರ ಜೊತೆ ಅರಣ್ಯದಲ್ಲಿ ಹುಡುಕಾಟ ನಡೆಸಿದ್ದು ತಡ ರಾತ್ರಿಯ ವೇಳೆ ಇವರನ್ನು ದಟ್ಟ ಅರಣ್ಯದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು ಬೆಳಗಿನ ಜಾವ ಇವರನ್ನು ಅರಣ್ಯದಿಂದ ಸುರಕ್ಷಿತವಾಗಿ ಹೊರತರಲಾಗಿದೆ.

Related posts

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ನಿಡ್ಲೆ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya
error: Content is protected !!