23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

ಬೆಳ್ತಂಗಡಿ: ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ನೀಡಿರುವ ಸೂಚನೆಯಂತೆ ಬೆಳ್ತಂಗಡಿ ತಾ. ಪಂ. ಸಭಾಂಗಣದಲ್ಲಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ರವರು ಲೋಕೋಪಯೋಗಿ ಇಲಾಖೆ, ಶಿಕ್ಷಣ ಇಲಾಖೆ, ಮೆಸ್ಕಾಂ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಸಭೆ ನಡೆಸಿ, ಜಿಲ್ಲಾಧಿಕಾರಿಗಳ ಆದೇಶದಂತೆ ಕ್ರಮ ವಹಿಸಲು ಸೂಚಿಸಿದರು.
ಗುಡ್ಡ ಜರಿತ ಉಂಟಾಗಬಹುದಾದ ಸ್ಥಳದಲ್ಲಿ ಅಥವಾ ಹೊಳೆ, ತೊರೆ ಬದಿಯಲ್ಲಿರುವ ಮನೆಗಳವರಿಗೆ ವಿಪರೀತ ಮಳೆಯ ಅವಧಿಯಲ್ಲಿ ಮನೆಯನ್ನು ತೆರವುಗೊಳಿಸಿ ಕಾಳಜಿ ಕೇಂದ್ರ ಅಥವಾ ಸಂಬಂಧಿಕರ ಮನೆಗೆ ತೆರಳುವಂತೆ ನೋಟೀಸನ್ನು ನೀಡುವುದು, ಗುಡ್ಡಜರಿತ ಉಂಟಾಗಬಹುದಾದ ಸ್ಥಳಗಳಲ್ಲಿ, ದಾಟಲು ಅಪಾಯಕಾರಿಯಾಗಿರುವ ಕಾಲುಸಂಕ, ಸೇತುವೆ ಇತ್ಯಾದಿ ಸ್ಥಳಗಳನ್ನು ಗುರುತಿಸಿ ಎಚ್ಚರಿಕೆ ಫಲಕಗಳ ಅಳವಡಿಕೆ, ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ಕರೆದು ಚರ್ಚಿಸುವುದು, ಶಾಲೆ ಮತ್ತು ಅಂಗನವಾಡಿ ಕಟ್ಟಡಗಳು ಶಿಥಿಲವಾಗಿದ್ದಲ್ಲಿ ಕೂಡಲೇ ವರದಿ ನೀಡಿ ತರಗತಿಗಳನ್ನು ನಡೆಸಲು ಬದಲಿ ವ್ಯವಸ್ಥೆ ಮಾಡುವುದು ಇತ್ಯಾದಿಗಳ ಬಗ್ಗೆ ಕೂಡಲೇ ಕ್ರಮ ವಹಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಚಿಸಲಾಯಿತು.

Related posts

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರಿನ ಮೇರೆಗೆ ಸಚಿವರು ಸಭೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya
error: Content is protected !!