September 6, 2026
ತಾಲೂಕು ಸುದ್ದಿ

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

ಬೆಳ್ತಂಗಡಿ: ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ನೀಡಿರುವ ಸೂಚನೆಯಂತೆ ಬೆಳ್ತಂಗಡಿ ತಾ. ಪಂ. ಸಭಾಂಗಣದಲ್ಲಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ರವರು ಲೋಕೋಪಯೋಗಿ ಇಲಾಖೆ, ಶಿಕ್ಷಣ ಇಲಾಖೆ, ಮೆಸ್ಕಾಂ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಸಭೆ ನಡೆಸಿ, ಜಿಲ್ಲಾಧಿಕಾರಿಗಳ ಆದೇಶದಂತೆ ಕ್ರಮ ವಹಿಸಲು ಸೂಚಿಸಿದರು.
ಗುಡ್ಡ ಜರಿತ ಉಂಟಾಗಬಹುದಾದ ಸ್ಥಳದಲ್ಲಿ ಅಥವಾ ಹೊಳೆ, ತೊರೆ ಬದಿಯಲ್ಲಿರುವ ಮನೆಗಳವರಿಗೆ ವಿಪರೀತ ಮಳೆಯ ಅವಧಿಯಲ್ಲಿ ಮನೆಯನ್ನು ತೆರವುಗೊಳಿಸಿ ಕಾಳಜಿ ಕೇಂದ್ರ ಅಥವಾ ಸಂಬಂಧಿಕರ ಮನೆಗೆ ತೆರಳುವಂತೆ ನೋಟೀಸನ್ನು ನೀಡುವುದು, ಗುಡ್ಡಜರಿತ ಉಂಟಾಗಬಹುದಾದ ಸ್ಥಳಗಳಲ್ಲಿ, ದಾಟಲು ಅಪಾಯಕಾರಿಯಾಗಿರುವ ಕಾಲುಸಂಕ, ಸೇತುವೆ ಇತ್ಯಾದಿ ಸ್ಥಳಗಳನ್ನು ಗುರುತಿಸಿ ಎಚ್ಚರಿಕೆ ಫಲಕಗಳ ಅಳವಡಿಕೆ, ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ಕರೆದು ಚರ್ಚಿಸುವುದು, ಶಾಲೆ ಮತ್ತು ಅಂಗನವಾಡಿ ಕಟ್ಟಡಗಳು ಶಿಥಿಲವಾಗಿದ್ದಲ್ಲಿ ಕೂಡಲೇ ವರದಿ ನೀಡಿ ತರಗತಿಗಳನ್ನು ನಡೆಸಲು ಬದಲಿ ವ್ಯವಸ್ಥೆ ಮಾಡುವುದು ಇತ್ಯಾದಿಗಳ ಬಗ್ಗೆ ಕೂಡಲೇ ಕ್ರಮ ವಹಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಚಿಸಲಾಯಿತು.

Related posts

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಪೊರ್ಲು’ ಕಾರ್ಯಕ್ರಮ

Suddi Udaya

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

Suddi Udaya
error: Content is protected !!