23.7 C
ಪುತ್ತೂರು, ಬೆಳ್ತಂಗಡಿ
June 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

ಮೂಡುಕೋಡಿ ಶ್ರೀ ರಾಮ ಭಜನಾ ಮಂದಿರದಲ್ಲಿ ಗ್ರಾಮ ಪಂಚಾಯತ್ ವೇಣೂರು, ಅರಣ್ಯ ಇಲಾಖೆ, ಯುವಸೇವಾ ಸಂಗಮ, ಕಾಟಿ ಅಭಿಮಾನಿ ಬಳಗ, ಶ್ರೀ ಕ್ಷೇ, ಧ. ಗ್ರಾ. ಅ. ಯೋಜನೆ, ಶೌರ್ಯ ವಿಪತ್ತು ಘಟಕ ಇವರ ಸಹಕಾರದೊಂದಿಗೆ ವನಮಹೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಸಿ. ಎ. ಬ್ಯಾಂಕ್ ಅಧ್ಯಕ್ಷ ಹಾಗೂ ಪಂ ಸದಸ್ಯ ಸುಂದರ್ ಹೆಗ್ಡೆ ಯವರು ವಹಿಸಿದ್ದರು.

ಈ ವೇಳೆ ಶ್ರೀ ಗಂಧ, ರಕ್ತ ಚಂದನ, ಮಾವು, ಹಲಸು ಸೇರಿದಂತೆ ನೂರು ಗಿಡಗಳ ವಿತರಣೆ ನಡೆಯಿತು
ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ತನ್ನ ಶೇ 25ರ ಅನುದಾನದಲ್ಲಿ ಕೊಡಮಾಡುವ ಸವಲತ್ತುಗಳ ವಿತರಣೆಯೂ ನಡೆಯಿತು. ಎರಡನೇ ವಾರ್ಡ್ ನ ಎಲ್ಲಾ ಮನೆಗಳಿಗೆ. ವಿ. ಗಾರ್ಡ್ ಕಂಪನಿ ಯ ಮಿಕ್ಸಿ ಹಾಗೂ ಒಂದನೇ ವಾರ್ಡ್ ನ ಎಲ್ಲಾ ಮನೆಗಳಿಗೆ ಚೇರ್ ವಿತರಣೆ ಮಾಡಲಾಯಿತು.


ಅಲ್ಲದೇ ರ್‍ಯಾಂಕ್ ವಿಜೇತೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೂಡುಕೋಡಿಯ ಕು| ಸುಪ್ರಿಯಾಳಿಗೆ ಸನ್ಮಾನಿಸಲಾಯಿತು.
ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಪ್ರಸ್ತಾವನೆ, ಸ್ವಾಗತಿಸಿ, ವಕೀಲ ಉಮೇಶ್ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.

Related posts

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya
error: Content is protected !!