September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

ಮೂಡುಕೋಡಿ ಶ್ರೀ ರಾಮ ಭಜನಾ ಮಂದಿರದಲ್ಲಿ ಗ್ರಾಮ ಪಂಚಾಯತ್ ವೇಣೂರು, ಅರಣ್ಯ ಇಲಾಖೆ, ಯುವಸೇವಾ ಸಂಗಮ, ಕಾಟಿ ಅಭಿಮಾನಿ ಬಳಗ, ಶ್ರೀ ಕ್ಷೇ, ಧ. ಗ್ರಾ. ಅ. ಯೋಜನೆ, ಶೌರ್ಯ ವಿಪತ್ತು ಘಟಕ ಇವರ ಸಹಕಾರದೊಂದಿಗೆ ವನಮಹೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಸಿ. ಎ. ಬ್ಯಾಂಕ್ ಅಧ್ಯಕ್ಷ ಹಾಗೂ ಪಂ ಸದಸ್ಯ ಸುಂದರ್ ಹೆಗ್ಡೆ ಯವರು ವಹಿಸಿದ್ದರು.

ಈ ವೇಳೆ ಶ್ರೀ ಗಂಧ, ರಕ್ತ ಚಂದನ, ಮಾವು, ಹಲಸು ಸೇರಿದಂತೆ ನೂರು ಗಿಡಗಳ ವಿತರಣೆ ನಡೆಯಿತು
ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ತನ್ನ ಶೇ 25ರ ಅನುದಾನದಲ್ಲಿ ಕೊಡಮಾಡುವ ಸವಲತ್ತುಗಳ ವಿತರಣೆಯೂ ನಡೆಯಿತು. ಎರಡನೇ ವಾರ್ಡ್ ನ ಎಲ್ಲಾ ಮನೆಗಳಿಗೆ. ವಿ. ಗಾರ್ಡ್ ಕಂಪನಿ ಯ ಮಿಕ್ಸಿ ಹಾಗೂ ಒಂದನೇ ವಾರ್ಡ್ ನ ಎಲ್ಲಾ ಮನೆಗಳಿಗೆ ಚೇರ್ ವಿತರಣೆ ಮಾಡಲಾಯಿತು.


ಅಲ್ಲದೇ ರ್‍ಯಾಂಕ್ ವಿಜೇತೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೂಡುಕೋಡಿಯ ಕು| ಸುಪ್ರಿಯಾಳಿಗೆ ಸನ್ಮಾನಿಸಲಾಯಿತು.
ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಪ್ರಸ್ತಾವನೆ, ಸ್ವಾಗತಿಸಿ, ವಕೀಲ ಉಮೇಶ್ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.

Related posts

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

Suddi Udaya

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya

ತೀರಾ ಹದಗೆಟ್ಟ ಮಚ್ಚಿನ ಪುರುಷರ ಮಜಲು ಕಲಾಯಿ ರಸ್ತೆ : ಶಾಲಾ ಮಕ್ಕಳ ಪರದಾಟ; ದುರಸ್ತಿಗೆ ಸ್ಥಳೀಯರ ಒತ್ತಾಯ

Suddi Udaya

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya
error: Content is protected !!