July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

ಮೂಡುಕೋಡಿ ಶ್ರೀ ರಾಮ ಭಜನಾ ಮಂದಿರದಲ್ಲಿ ಗ್ರಾಮ ಪಂಚಾಯತ್ ವೇಣೂರು, ಅರಣ್ಯ ಇಲಾಖೆ, ಯುವಸೇವಾ ಸಂಗಮ, ಕಾಟಿ ಅಭಿಮಾನಿ ಬಳಗ, ಶ್ರೀ ಕ್ಷೇ, ಧ. ಗ್ರಾ. ಅ. ಯೋಜನೆ, ಶೌರ್ಯ ವಿಪತ್ತು ಘಟಕ ಇವರ ಸಹಕಾರದೊಂದಿಗೆ ವನಮಹೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಸಿ. ಎ. ಬ್ಯಾಂಕ್ ಅಧ್ಯಕ್ಷ ಹಾಗೂ ಪಂ ಸದಸ್ಯ ಸುಂದರ್ ಹೆಗ್ಡೆ ಯವರು ವಹಿಸಿದ್ದರು.

ಈ ವೇಳೆ ಶ್ರೀ ಗಂಧ, ರಕ್ತ ಚಂದನ, ಮಾವು, ಹಲಸು ಸೇರಿದಂತೆ ನೂರು ಗಿಡಗಳ ವಿತರಣೆ ನಡೆಯಿತು
ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ತನ್ನ ಶೇ 25ರ ಅನುದಾನದಲ್ಲಿ ಕೊಡಮಾಡುವ ಸವಲತ್ತುಗಳ ವಿತರಣೆಯೂ ನಡೆಯಿತು. ಎರಡನೇ ವಾರ್ಡ್ ನ ಎಲ್ಲಾ ಮನೆಗಳಿಗೆ. ವಿ. ಗಾರ್ಡ್ ಕಂಪನಿ ಯ ಮಿಕ್ಸಿ ಹಾಗೂ ಒಂದನೇ ವಾರ್ಡ್ ನ ಎಲ್ಲಾ ಮನೆಗಳಿಗೆ ಚೇರ್ ವಿತರಣೆ ಮಾಡಲಾಯಿತು.


ಅಲ್ಲದೇ ರ್‍ಯಾಂಕ್ ವಿಜೇತೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೂಡುಕೋಡಿಯ ಕು| ಸುಪ್ರಿಯಾಳಿಗೆ ಸನ್ಮಾನಿಸಲಾಯಿತು.
ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಪ್ರಸ್ತಾವನೆ, ಸ್ವಾಗತಿಸಿ, ವಕೀಲ ಉಮೇಶ್ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.

Related posts

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ ಪ್ರಯುಕ್ತ ಗಣಹೋಮ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!