23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

ಶಿಶಿಲ: ಇತಿಹಾಸ ಪ್ರಸಿದ್ಧ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆಗೆ ಎರಡು ವರ್ಷಗಳಿಂದ ಮೀನ ಮೇಷ ನಡೆಯುತ್ತಿದೆ.

ಜೀರ್ಣೋದ್ಧಾರ ಮತ್ತು ಎರಡು ಬ್ರಹ್ಮಕಲಶವನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿರುವ ಕೀರ್ತಿ ಗ್ರಾಮಸ್ಥರಿದ್ದು. ಇದೀಗಿನ ರಾಜಕೀಯ ವ್ಯವಸ್ಥೆಯಿಂದ ಇನ್ನೂ ವ್ಯವಸ್ಥಾಪನಾ ಸಮಿತಿಯು ರಚನೆಯಾಗದೆ ಬಾಕಿಯಿರುವುದಾಗಿ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಿತಿ ಇಲ್ಲದೆ ದೇವಾಲಯದ ಎಲ್ಲಾ ಅಭಿವೃದ್ಧಿ ಕಾರ್ಯ ನಿಂತಿದೆ. ಸಾವಿರಾರು ಊರ‌ ಪರವೂರಿಂದ ಭಕ್ತಾದಿಗಳು ಬರುತ್ತಿದ್ದಾರೆ.ಅನ್ನ ದಾಸೊಹ ನಡೆಯುತ್ತಿದೆ. ಮತ್ಸ್ಯ ಸಂಕುಲಗಳಿದ್ದಾವೆ. ಕೃಷಿ ನಿರ್ವಹಣೆ ಆಗಬೇಕಾಗಿದೆ. ಹೀಗಿದ್ದರೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಆಯ್ಕೆ ಆಗಿದ್ದಾರೊ ಇಲ್ಲವೊ ಇನ್ನೂ ಮಾಹಿತಿ ಇಲ್ಲ. ಮುಜರಾಯಿ ಇಲಾಖೆಯನ್ನು ಸಂಪರ್ಕಿಸಿದರೆ ಜವಾಬ್ದಾರಿ ಉತ್ತರವಿಲ್ಲ. ಗ್ರಾಮದ ಊರ ಪರವೂರ ದಾನಿಗಳಿಂದಲೆ ಅಭಿವೃದ್ಧಿ ಆಗಿರುವ ಈ ಪುಣ್ಯಕ್ಷೇತ್ರಕ್ಕೆ ಈ ರೀತಿಯ ಸಮಿತಿ ರಚನೆಗೆ ಯಾಕೆ ತಡವಾಗುತ್ತಿದೆ ಎಂಬ ಮಾಹಿತಿ ಇಲ್ಲ.


ಆದುದರಿಂದ ಕೂಡಲೆ ವ್ಯವಸ್ಥಾಪನಾ ಸಮಿತಿ ರಚಿಸುವಂತೆ ಭಕ್ತರು ಆಗ್ರಹಿಸಿದ್ದಾರೆ ಹಾಗೂ ಮುಜರಾಯಿ ಇಲಾಖೆಗೂ ಮಾಹಿತಿ ನೀಡಿರುತ್ತಾರೆ.

ತಪ್ಪಿದ್ದಲ್ಲಿ ಗ್ರಾಮದ ಭಕ್ತಾಧಿಗಳೆ ಊರ ಭಕ್ತರ ಸಭೆ ಕರೆದು ಪ್ರತಿಭಟನೆಗೆ ಮುಂದಾಗುವುದಾಗಿ ಮಾಜಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯ ಮತ್ತು ಕರುಣಾಕರ ಶಿಶಿಲ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

Suddi Udaya
error: Content is protected !!