23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

ಉಜಿರೆ: ಇಲ್ಲಿನ ಶ್ರೀ. ಧ. ಮಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕ ನೆವಿಲ್ ನವೀನ್ ಮೋರಸ್ ಮತ್ತು ದೀಪಕ್ ಇತ್ತೀಚಿಗೆ ನಡೆದ ಎರಡು ವಿಭಿನ್ನ ಅಂತಾರಾಷ್ಟ್ರೀಯ ವಿಚಾರ ಸಂಕೀರ್ಣಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿ ಭಾಗವಹಿಸಿದರು.

ಮೇ ತಿಂಗಳ 15 ಮತ್ತು 16 ರಂದು ಮಂಗಳೂರಿನ ಯೆನೆಪೋಯ ( ಡೀಮ್ಡ್ ಟು ಬಿ ಯುನಿವರ್ಸಿಟಿ) ದಲ್ಲಿ ಭಾರತ ಸರಕಾರ ಮತ್ತು ಯೂತ್ ಅಫೇರ್ಸ್ ಮತ್ತು ಸ್ಪೋರ್ಟ್ಸ್ ವತಿಯಿಂದ “ ಭಾರತದ ಭವಿಷ್ಯವನ್ನು ಕಲ್ಪಿಸುವುದು: ಬದಲಾವಣೆ ತರುವವರಾಗಿ ಯುವಕರು ” ಎಂಬ ಹೆಸರಿನಡಿಯಲ್ಲಿ ನಡೆದ ಅಂತಾರಾಷ್ಟ್ರೀಯ ವಿಚಾರ ಸಂಕೀರ್ಣ ಐಕಾನ್ ಯೂತ್ 2025 ರಲ್ಲಿ ಇಲ್ಲಿನ ಪ್ರಥಮ ವರ್ಷದ ಬಿ.ಎ ವಿದ್ಯಾರ್ಥಿ ಹಾಗೂ ಎನ್ ಎಸ್ ಎಸ್ ಸ್ವಯಂ ಸೇವಕ ನೇವಿಲ್ ನವೀನ್ ಮೊರಾಸ್ ಮಂಗಳೂರು ವಿಶ್ವ ವಿದ್ಯಾನಿಲಯವನ್ನು ಪ್ರತಿನಿಧೀಕರಿಸಿ ಭಾಗವಹಿಸಿದರು.

ಇದೇ ತಿಂಗಳ 5 ಮತ್ತು 6 ರಂದು ರಾಜ್ಯ ಎನ್ ಎಸ್ ಎಸ್ ಸೆಲ್ ಮತ್ತು ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ವಿಭಾಗದ ಸಹಯೋಗದೊಂದಿಗೆ ನಡೆದ “ ಗ್ಲೋಬಲ್ ಯೂತ್ ಸುಮ್ಮಿಟ್ 2025 , ಯೂತ್ ಪವರ್ , ಇನ್ನೋವೇಟ್, ಇನ್ಸ್ಪೈರ್, ಇಂಪ್ಯಾಕ್ಟ್ ” ನಲ್ಲಿ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ದೀಪಕ್ ಮಂಗಳೂರು ವಿಶ್ವ ವಿದ್ಯಾನಿಲಯವನ್ನು ಪ್ರತಿನಿಧೀಕರಿಸಿ ಭಾಗವಹಿಸಿದರು.ಇವರಿಗೆ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ. ಪಿ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಡಾ.ಮಹೇಶ್ ಕುಮಾರ್ ಶೆಟ್ಟಿ ಹೆಚ್, ಪ್ರೊ.ದೀಪ ಆರ್. ಪಿ ಅಭಿನಂದಿಸಿದ್ದಾರೆ.

Related posts

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya
error: Content is protected !!