23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

ಬೆಳ್ತಂಗಡಿ : ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಸಂಕಷ್ಟಕ್ಕೆ ಸ್ಪಂದಿಸಲು “ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿಯನ್ನು ಪ್ರಾರಂಭಿಸಲಾಗಿದ್ದು, ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಅಗತ್ಯ ತುರ್ತು ಸ್ಪಂದನೆ ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಅದುವೇ ”ತುರ್ತು ಸ್ಪಂದನ ವ್ಯವಸ್ಥೆ-112”.
ನಗರದ ಜನರು ತುರ್ತು ಸಂದರ್ಭಗಳಲ್ಲಿ ಪೊಲೀಸ್, ಅಗ್ನಿ ಶಾಮಕ, ವಿಪತ್ತು ಬೇರೆ ಬೇರೆ ಸಹಾಯವಾಣಿಗೆ ಕರೆಮಾಡುವ ಅಗತ್ಯವಿಲ್ಲ. ಕೇವಲ 112 ಸಂಖ್ಯೆಗೆ ಕರೆ ಮಾಡಿದರೆ ಸಾಕು, ಈ ಎಲ್ಲಾ ಸಮಸ್ಯೆಗಳಿಗೂ ತುರ್ತು ಸೇವೆ ಸಾರ್ವಜನಿಕರಿಗೆ ಲಭಿಸಲಿದೆ.

ಮಂಗಳೂರು ನಗರ ಪೋಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅಪಘಾತ, ಕೊಲೆ, ದರೋಡೆ, ಕಳ್ಳತನ, ಸುಲಿಗೆ, ಸರಗಳ್ಳತನ, ಜಗಳ, ಮಹಿಳಾ, ಮಕ್ಕಳ, ಹಿರಿಯ ನಾಗರಿಕರ, ಸಂಶಯವಿರುವ ವಾಹನ ಅಥವಾ ವ್ಯಕ್ತಿಗಳು ಇದ್ದಲ್ಲಿ ಹಾಗೂ ಇನ್ನಿತರ ಎಲ್ಲಾ ರೀತಿಯ ತುರ್ತು ಸ್ಪಂದನ ಸಹಾಯ ವ್ಯವಸ್ಥೆಗೆ, ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡುವ ಮೊದಲು ಡಯಲ್ 112 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಈ ವ್ಯವಸ್ಥೆಯಲ್ಲಿ ನಿಮ್ಮ ಕರೆಯನ್ನು ಮೊದಲ ಆದ್ಯತೆ ಪರಿಗಣಿಸಿ ಹತ್ತಿರವಿರುವ ಪೊಲೀಸ್ ವಾಹನವನ್ನು ನೀವು ಇರುವ ಸ್ಥಳಕ್ಕೆ ಕಳುಹಿಸಿ ನಿಮ್ಮ ಸಮಸ್ಯೆಯನ್ನು ಬಗೆಹರಿಸುವುದಾಗಿದೆ.

ಪೊಲೀಸ್ ನೆರವು / ಅಗ್ನಿ ಶಾಮಕ ದಳದ ನೆರವು / ವಿಪತ್ತು ನೆರವು ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲಿ ನೂತನವಾದ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಎಮೆರ್ಜೆನ್ಸಿ ರೆಸ್ಪಾಂನ್ಸ್ ಸಪೋರ್ಟ್ ಸಿಸ್ಟಮ್ ( ERSS ) ವ್ಯವಸ್ಥೆಯಡಿ ನಗರದ ಎಲ್ಲಿಂದಲೇ ಕರೆ ಬಂದರು ತುರ್ತಾಗಿ ಅಲ್ಲಿಗೆ ತಲುಪಿ ರಕ್ಷಣೆ ಒದಗಿಸಲಾಗುತ್ತದೆ.

ಸಾರ್ವಜನಿಕ ತುರ್ತು ಸ್ಪಂದನಾ ಸಹಾಯ ವ್ಯವಸ್ಥೆಗಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 28 ಪೆಟ್ರೋಲಿಂಗ್ ವಾಹನಗಳನ್ನು ಈ ಕರ್ತವ್ಯಕ್ಕೆ ಬಳಸಲಾಗುತ್ತಿದ್ದು, ದಿನದ 24*7 ಕಾರ್ಯ ನಿರ್ವಹಿಸುತ್ತಿದೆ . ಇದರಲ್ಲಿ 21 ಹೊಯ್ಸಳ ಮತ್ತು 07 ಹೈವೇ ಪೆಟ್ರೋಲ್ ವಾಹನಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಸದರಿ ವ್ಯವಸ್ಥೆಯನ್ನು ಸದುಪಯೋಗ ಪಡಿಸಿ ಕೊಳ್ಳಬಹುದಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಕುಕ್ಕೇಡಿ- ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya
error: Content is protected !!