22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

ಗರ್ಡಾಡಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸತ್ಯ ಶೋಧಕ ವೇದಿಕೆಯಿಂದ ಜೂ. 8 ರಂದು ಗರ್ಡಾಡಿ ಗ್ರಾಮದ ಹಚ್ಚಾಡಿ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ, ಅಂಗನವಾಡಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಸತ್ಯ ಶೋಧಕ ವೇದಿಕೆಯ ಅಧ್ಯಕ್ಷ ಸುಕೇಶ್ ಮಾಲಾಡಿ ಮಾತಾಡಿ, ನಮ್ಮ ಮುಂದಿನ‌ ಬದುಕಿಗಾಗಿ ನಾವು ಪರಿಸರವನ್ನು ಸಂರಕ್ಷಣೆ ಮಾಡಲೇಬೇಕಾಗಿದೆ. ಹಸಿರೇ ಉಸಿರು, ಉಸಿರಿಗಾಗಿ ಪರಿಸರ ಎನ್ನುವಂತೆ ಸತ್ಯ ಶೋಧಕದ ಆಶಯಗಳಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ಕೂಡ ಒಂದು. ಪರಿಸರದ ಕಾಳಜಿ ಸಣ್ಣ ಮಕ್ಕಳಿಂದಲೇ ಆರಂಭವಾಗಬೇಕು ಎಂದು ಸಣ್ಣ ಮಕ್ಕಳನ್ನೇ ಆಯ್ಕೆ ಮಾಡಿದ್ದೇವೆ.‌ ಮುಂದಿನ ದಿನಗಳಲ್ಲಿ ಹಚ್ಚಾಡಿ ಅಂಗನವಾಡಿ ಕೇಂದ್ರಕ್ಕೆ ತಮ್ಮ ತಂಡದಿಂದಾಗುವ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.

ಹಚ್ಚಾಡಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಗುಲಾಬಿ‌ ರವರು ಪರಿಸರ ದಿನದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮಕ್ಕೆ ಅಂಗನವಾಡಿಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸತ್ಯ ಶೋಧಕ ತಂಡಕ್ಕೆ ಧನ್ಯವಾದ ಸಲ್ಲಿಸಿದರು.‌

ವೇದಿಕೆಯಲ್ಲಿ ಪುಟಾಣಿ ವಂಶಿಕಾ ಇದ್ದರು.‌ ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಪರಿಸರದಲ್ಲಿ ಮಕ್ಕಳಿಂದ ಹಾಗೂ ಪೋಷಕರಿಂದ ಗಿಡ ನೆಡಿಸಲಾಯಿತು. ಗಿರೀಶ್ ಪಣಕಜೆ ಸ್ವಾಗತಿಸಿ, ಬಾಬಿ ಮಡಂತ್ಯಾರು ವಂದಿಸಿದರು.

Related posts

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya
error: Content is protected !!