September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

ಗರ್ಡಾಡಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸತ್ಯ ಶೋಧಕ ವೇದಿಕೆಯಿಂದ ಜೂ. 8 ರಂದು ಗರ್ಡಾಡಿ ಗ್ರಾಮದ ಹಚ್ಚಾಡಿ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ, ಅಂಗನವಾಡಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಸತ್ಯ ಶೋಧಕ ವೇದಿಕೆಯ ಅಧ್ಯಕ್ಷ ಸುಕೇಶ್ ಮಾಲಾಡಿ ಮಾತಾಡಿ, ನಮ್ಮ ಮುಂದಿನ‌ ಬದುಕಿಗಾಗಿ ನಾವು ಪರಿಸರವನ್ನು ಸಂರಕ್ಷಣೆ ಮಾಡಲೇಬೇಕಾಗಿದೆ. ಹಸಿರೇ ಉಸಿರು, ಉಸಿರಿಗಾಗಿ ಪರಿಸರ ಎನ್ನುವಂತೆ ಸತ್ಯ ಶೋಧಕದ ಆಶಯಗಳಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ಕೂಡ ಒಂದು. ಪರಿಸರದ ಕಾಳಜಿ ಸಣ್ಣ ಮಕ್ಕಳಿಂದಲೇ ಆರಂಭವಾಗಬೇಕು ಎಂದು ಸಣ್ಣ ಮಕ್ಕಳನ್ನೇ ಆಯ್ಕೆ ಮಾಡಿದ್ದೇವೆ.‌ ಮುಂದಿನ ದಿನಗಳಲ್ಲಿ ಹಚ್ಚಾಡಿ ಅಂಗನವಾಡಿ ಕೇಂದ್ರಕ್ಕೆ ತಮ್ಮ ತಂಡದಿಂದಾಗುವ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.

ಹಚ್ಚಾಡಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಗುಲಾಬಿ‌ ರವರು ಪರಿಸರ ದಿನದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮಕ್ಕೆ ಅಂಗನವಾಡಿಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸತ್ಯ ಶೋಧಕ ತಂಡಕ್ಕೆ ಧನ್ಯವಾದ ಸಲ್ಲಿಸಿದರು.‌

ವೇದಿಕೆಯಲ್ಲಿ ಪುಟಾಣಿ ವಂಶಿಕಾ ಇದ್ದರು.‌ ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಪರಿಸರದಲ್ಲಿ ಮಕ್ಕಳಿಂದ ಹಾಗೂ ಪೋಷಕರಿಂದ ಗಿಡ ನೆಡಿಸಲಾಯಿತು. ಗಿರೀಶ್ ಪಣಕಜೆ ಸ್ವಾಗತಿಸಿ, ಬಾಬಿ ಮಡಂತ್ಯಾರು ವಂದಿಸಿದರು.

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ನಾವೂರು: ಮುರ ಮದರಸದಲ್ಲಿ ಮಾದಕ ದ್ರವ್ಯ ವಿರುದ್ಧದ ಅಭಿಯಾನ ಹಾಗೂ ಸ್ನೇಹ ಸಹವಾಸ ಶಿಬಿರ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya
error: Content is protected !!