23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಮುಂಡೂರು ಸ.ಪ್ರಾ. ಶಾಲೆಯ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

ಮುಂಡೂರು ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ ಹಾಗೂ ಸರಕಾರಿ ಪ್ರಾಥಮಿಕ ಶಾಲೆ ಮುಂಡೂರು ಇವರ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಹಾಗೂ ಶಾಲಾ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮ ಉದ್ದೇಶಿಸಿ ಪ್ರಸ್ತಾವಿಕವಾಗಿ ಕೃಷಿ ಮೇಲ್ವಿಚಾರಕ ಕೃಷ್ಣ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹೆಗ್ಗಡೆ ಯವರ ಮಾರ್ಗದರ್ಶನಂತೆ ಪ್ರತಿ ವರ್ಷ ಶಾಲಾ-ಕಾಲೇಜು, ಸಮುದಾಯ ಭವನ, ದೇವಸ್ಥಾನ, ಕೆರೆಯಂಗಳದಲ್ಲಿ ಗಿಡ ನಾಟಿ ಮಾಡುವುದರ ಮೂಲಕ ಪರಿಸರ ಸಂರಕ್ಷಣೆ ಮತ್ತು ಮಾಹಿತಿ ಕಾರ್ಯಕ್ರಮವನ್ನು ಆಚರಣೆ ಮಾಡುತ್ತಿದ್ದೇವೆ. ಈ ಭೂಮಿ ಮೇಲೆ ಮನುಷ್ಯ ಬದುಕಬೇಕಾದರೆ ಪರಿಸರ ನಮಗೆ ತೀರ ಅವಶ್ಯವಾಗಿಬೇಕು. ಗಿಡವನ್ನು ನೆಟ್ಟು ಪಾಲನೆ, ಪೋಷಣೆ ಮಾಡಿ ರಕ್ಷಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಚಾಮರಾಜ ಸೀಮಿತ್ ರವರು ಮಾತನಾಡಿ ಈ ಭೂಮಿಲಿ ಇರುವಂತ ಪ್ರತಿಯೊಂದು ಪಶು, ಪಕ್ಷಿ, ಪ್ರಾಣಿಗಳು, ಮನುಷ್ಯರು ಬದುಕಬೇಕೆಂದರೆ ನಮಗೆ ಈ ಭೂಮಿಯ ಮೇಲೆ ಪರಿಸರ ಅತ್ಯಂತ ಮುಖ್ಯವಾಗಿ ಬೇಕಾಗಿರುವಂತದ್ದು, ಮನುಷ್ಯನ ಉಸಿರಾಟಕ್ಕೆ ಆಮ್ಲಜನಕ ಎಷ್ಟು ಮುಖ್ಯವೋ, ಶುದ್ಧವಾದ ಆಮ್ಲಜನಕ ಕೊಡುವಂತ ಗಿಡ ಮರಗಳು ಅಷ್ಟೇ ಮುಖ್ಯವಾದದ್ದು ಹಾಗಾಗಿ ಎಲ್ಲರೂ ಗಿಡ ನೆಟ್ಟು, ಗಿಡಗಳ ರಕ್ಷಣೆ ಮಾಡಬೇಕೆಂದು ತಿಳಿಸಿದರು.

ಗಿಡ ನಾಟಿ ಕಾರ್ಯಕ್ರಮಕ್ಕೆ ಮೇಲ್ವಿಚಾರಕಿ ಯಶೋಧ ರವರು ಚಾಲನೆ ನೀಡಿದರು. ಶೌರ್ಯ ವಿಪತ್ತುಗುರುವಾಯನಕೆರೆ ತಂಡ ದವರಿಂದ ಗಿಡ ನಾಟಿ ಮಾಡಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯ ಕಲ್ಲೇಶ್ ಅವರು ಪರಿಸರ ಸಂರಕ್ಷಣೆ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ತಂಡದ ನಾಗೇಶ್, ಜಗನಾಥ್ , ಸೇವಾಪ್ರತಿನಿಧಿ ಶ್ರೀಮತಿ ಭಾರತಿ ಹಾಗೂ ಶ್ರೀಮತಿ ಪ್ರತಿಭಾ, ಚಂದ್ರವತಿ, ಹಾಗೂ ಅಶೋಕ್ ಜೈನ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು, ಸಂಘದ ಸದಸ್ಯರು, ಶಾಲೆಯ ಮಕ್ಕಳು, ಊರಿನ ಗ್ರಾಮಸ್ಥರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

Suddi Udaya

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

Suddi Udaya

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ :

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya
error: Content is protected !!