25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ : 3ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಮೂರನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಬಂಗ್ಲೆ ಮೈದಾನದಲ್ಲಿ ಸದಸ್ಯರ ಸಮ್ಮುಖದಲ್ಲಿ ಜೂ. 8ರಂದು ನಡೆಯಿತು.

ಅಧ್ಯಕ್ಷರಾಗಿ ಕೌಶಿಕ್ ಶೆಟ್ಟಿ ಕಾಡಿಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಅನಿಲಡೆ, ಕೋಶಾಧಿಕಾರಿಯಾಗಿ ಗಿರೀಶ್ ಮೂಲ್ಯ ಅನಿಲಡೆ, ಆಯ್ಕೆಯಾದರು.

ಸಮಿತಿಯ ಗೌರವಾಧ್ಯಕ್ಷರಾದ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಮ್. ತುಂಗಪ್ಪ ಬಂಗೇರ ಮಾತನಾಡಿ, 2 ವರ್ಷದಲ್ಲಿ ಗಣೇಶ ಚತುರ್ಥಿ ಯಶಸ್ವಿಯಾಗಿ ನಡೆಯಲು ನಮಗೆ ಅದೆಷ್ಟೋ ದಾನಿಗಳು, ಸೇವಾರೂಪದಲ್ಲಿ ಸಹಕರಿಸಿದ್ದಾರೆ ಇಂಥವರ ಸೇವಾ ಮನೋಭಾವನೆಯಿಂದಲೇ ಸಾರ್ವಜನಿಕ ಗಣೇಶೋತ್ಸವ ಯಶಸ್ವಿಯಾಗಿ ನಡೆದಿದೆ ಹಾಗೂ ಮುಂದೆಯೂ ಸೇವಕರ್ತರ, ಹಾಗೂ ಆನ್ನದಾನಿಗಳ ಸಹಕಾರ ಇರಲಿ ಎಂದು ಮಾತನಾಡಿ ನೂತನ ಸಮಿತಿಗೆ ಶುಭ ಹಾರೈಸಿದರು.

ನೂತನ ಸಮಿತಿಯ ಪದಾಧಿಕಾರಿಗಳ ಗೌರವಾಧ್ಯಕ್ಷರಾಗಿ ಎಮ್. ತುಂಗಪ್ಪ ಬಂಗೇರ ಮೂರ್ಜೆ, ಪ್ರಕಾಶ್ ಪೂಜಾರಿ ಅನಿಲಡೆ ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ದಂಡೆ, ಹರೀಶ್ ಪ್ರಭು ಮಾಡ, ಜೊತೆ ಕೋಶಾಧಿಕಾರಿಯಾಗಿ ಸೀತಾರಾಮ ಶೆಟ್ಟಿಗಾರ್ ನಾಕುನಾಡು, ಕಾರ್ಯದರ್ಶಿಯಾಗಿ ಪ್ರವೀಣ್ ಗೌಡ ನರ್ಸಿಕುಮೇರ್, ಮತ್ತು ಯೋಗೀಶ್ ಆಚಾರ್ಯ ನಿನ್ಯಾರು, ಸಂಘಟನಾ ಕಾರ್ಯದರ್ಶೀಯಾಗಿ ಯೋಗೀಶ್ ಪೂಜಾರಿ ಕುಕ್ಕಳ, ಮತ್ತು ಸುಧಾಕರ ನಾಕುನಾಡು, ಲೆಕ್ಕ ಪರಿಶೋಧಕರಾಗಿ ಮಂಜಪ್ಪ ಮೂಲ್ಯ ಅತ್ತಾಜೆ, ಉದಯ ಕುಮಾರ್ ಶೆಟ್ಟಿ ಮೆಲ್ಮನೆ, ಅನಂತ ಕೃಷ್ಣ ಆಚಾರ್ಯ ಬಾರ್ದೋಟ್ಟು, ಕಿಶೋರ್ ಕುಮಾರ್ ಮೂರ್ಜೆ, ಕಾರ್ಯಕ್ರಮ ಸoಯೋಜಕರಾಗಿ ಕಿಶೋರ್ ಹೆಚ್. ಪೂಜಾರಿ ಹಟ್ಟತೋಡಿ ಮತ್ತು ತಾರಾನಾಥ್ ಕಜೆಕಾರ್ ಹಾಗೂ ಗೌರವ ಸಲಹೆಗಾರರಾಗಿ ಪುನೀತ್ ಕುಮಾರ್ ಮಡಂತ್ಯಾರು, ರಮಾನಂದ ಪೂಜಾರಿ ಮೂರ್ಜೆ, ಚಂದ್ರಶೇಖರ ಶೆಟ್ಟಿಗಾರ್ ಅತ್ತಾಜೆ, ಹರೀಶ್ಚಂದ್ರ ಶೆಟ್ಟಿಗಾರ್ ನಾಕುನಾಡು, ಪ್ರವೀಣ್ ಶೆಟ್ಟಿ ಕುರ್ಡುಮೆ, ಸ್ವಸ್ತಿಕ್ ಗೌಡ ಹಟ್ಟತೋಡಿ ಮತ್ತು ಶ್ರೀ ಗೌರಿ ಮಹಿಳಾ ಸಮಿತಿಯ ಸಂಚಾಲಕರಾಗಿ ಶಶಿಕಲಾ .G.ಪೂಜಾರಿ ಪುಂಜಾಲಕಟ್ಟೆ, ಸಹಸಂಚಾಲಕರಾಗಿ ವಿಜಯ ನಾಕುನಾಡು ಇವರನ್ನು ಸಮಿತಿಯ ಸದಸ್ಯರ ಮತ್ತು ಗ್ರಾಮಸ್ಥರ ಉಪಸ್ಥಿತಿಯಲ್ಲಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸ್ಥಾಪಕ ಅಧ್ಯಕ್ಷ ಚಿದಾನಂದ ಮಣಿಂಜ, ಅರ್ಚಕರಾದ ಗೋವಿಂದ ಭಟ್, ಸಂತೋಷ ಭಟ್ ಹಾಗೂ ಊರ ಪ್ರಮುಖರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಹರೀಶ್ ಪ್ರಭು ಸ್ವಾಗತಿಸಿದರು. ತಾರಾನಾಥ್ ಕಜೆಕಾರ್ ವಂದಿಸಿದರು.

Related posts

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ಸೋಮಂತ್ತಡ್ಕದಲ್ಲಿ ಶ್ರೀಮತಿ ಪುಷ್ಪ ಮತ್ತು ಪುರುಷೋತ್ತಮ ಆಚಾರ್ಯ ಮಾಲಕತ್ವದ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್-ಫರ್ನಿಚರ್ಸ್ ಪ್ರಾರಂಭೋತ್ಸವ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya
error: Content is protected !!