September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

ಬೆಳ್ತಂಗಡಿ: ಚಿತ್ರದುರ್ಗದಿಂದ ಬಂದು ಬೆಳ್ತಂಗಡಿ ಮೂಲಕ ಬಲ್ಲಾಳರಾಯನ ದುರ್ಗಕ್ಕೆ ಚಾರಣಕ್ಕೆ ತೆರಳಿದ್ದ 10 ತಂಡ ಬಲ್ಲಾಳರಾಯನ ದುರ್ಗಾದ ಕಾಡಿನಲ್ಲಿ ಸಿಲುಕಿದ ಘಟನೆ ಜೂ. 9 ರಂದು ತಡರಾತ್ರಿಯಲ್ಲಿ ನಡೆದಿದೆ.

ಜೂ. 9 ರಂದು ಬೆಳಗ್ಗೆ, ಬೆಳ್ತಂಗಡಿಗೆ ಬಂದು ಅರಣ್ಯದ ಮೂಲಕ ಟ್ರೆಕ್ಕಿಂಗ್ ಆರಂಭಿಸಿದ ಐವರು ಯುವಕರು ಹಾಗೂ ಐದು ಮಂದಿ ಯುವತಿಯರ ತಂಡ ಚಾರಣಿಗರು ರಾತ್ರಿಯ ವೇಳೆ ದಟ್ಟ ಕಾಡಿನ ನಡುವೆ ಸಿಲುಕಿಕೊಂಡಿದ್ದು, ಬಳಿಕ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಗೆ ಕರೆ ಮಾಡಿ ಸಹಾಯ ಮಾಡುವಂತೆ ಕೋರಿದ್ದಾರೆ ಎನ್ನಲಾಗಿದೆ.

ನಂತರ ಕಾರ್ಯ ಪ್ರವೃತ್ತರಾದ ಚಿಕ್ಕಮಗಳೂರು ಪೊಲೀಸರು, ಅರಣ್ಯ ಸಿಬ್ಬಂದಿ ಸೇರಿದಂತೆ ಸ್ಥಳೀಯರ ಜೊತೆ ಅರಣ್ಯದಲ್ಲಿ ಹುಡುಕಾಟ ನಡೆಸಿದ್ದು ತಡ ರಾತ್ರಿಯ ವೇಳೆ ಇವರನ್ನು ದಟ್ಟ ಅರಣ್ಯದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು ಬೆಳಗಿನ ಜಾವ ಇವರನ್ನು ಅರಣ್ಯದಿಂದ ಸುರಕ್ಷಿತವಾಗಿ ಹೊರತರಲಾಗಿದೆ.

Related posts

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರಿಟ್ ಪಿಟಿಷನ್ ವಜಾ

Suddi Udaya

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya
error: Content is protected !!