ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 558 ನೇ ಸೇವಾ ಯೋಜನೆ ಅಂಗವಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾಪಿನಡ್ಕ ಬಳಂಜ ಮಕ್ಕಳಿಗೆ ಉಚಿತ ಪುಸ್ತಕ ಮತ್ತು ಬ್ಯಾಗ್ ವಿತರಣೆ ಜೂ. 8ರಂದು ಕಾಪಿನಡ್ಕ ಸ.ಕಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪುಸ್ತಕ ಮತ್ತು ಬ್ಯಾಗ್ ವಿತರಣೆ ಮಾಡಿ ಮಾತನಾಡಿದ ಪತ್ರಿಕೆಯ ವರದಿಗಾರ , ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ಮನೋಹರ್ ಬಳಂಜ ಮಾತನಾಡಿ ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಊರಿನ ಸಂಘ ಸಂಸ್ಥೆಗಳು ಮತ್ತು ಹಳೆ ವಿದ್ಯಾರ್ಥಿಗಳದ್ದು. ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು ಸರಕಾರದ ಅನೇಕ ಸೌಲಭ್ಯಗಳು ಸಿಗುತ್ತಿದೆ. ಮಕ್ಕಳ ಸಂಖ್ಯೆ ಕಡಿಮೆಯಾದರೆ ಮಾತ್ರ ಅನುದಾನ ಕಡಿತವಾಗುತ್ತದೆ. ಆಗ ಸಂಘ ಸಂಸ್ಥೆಗಳು ಕೈಜೊಡಿಸಿದಾಗ ಮಕ್ಕಳಿಗೆ ನೆರವಾಗುತ್ತದೆ. ರಾಜಕೇಸರಿ ಸಂಘಟನೆ ಹಲವಾರು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ನೊಂದವರಿಗೆ ನೆರವು, ಸರಕಾರಿ ಶಾಲೆಯ ಅಭಿವೃದ್ಧಿ, ಸರಕಾರಿ ಆಸ್ಪತ್ರೆಗಳಲ್ಲಿ ಸೇವೆ ಇನ್ನಿತರ ಸಮಾಜಮುಖಿ ಕಾರ್ಯ ಮಾಡುತ್ತಿದ್ದು ಇದು ನೈಜ ಸಮಾಜಸೇವೆಯಾಗಿದೆ. ಇವರೊಂದಿಗೆ ಇನ್ನಷ್ಟು ದಾನಿಗಳು ಕೈಜೋಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಗುರುವಾಯನಕೆರೆ, ಪ್ರಧಾನ ಸಂಚಾಲಕರಾದ ಜಗದೀಶ್ ಲಾಯಿಲ, ಸಹ ಸಂಚಾಲಕರಾದ ಶರತ್ ಕರಾಯ, ಸಾಮಾಜಿಕ ಜಾಲತಾಣದ ಸಂಪತ್, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್ ಪೂಜಾರಿ, ಕ್ರೀಡಾ ಕಾರ್ಯದರ್ಶಿಯಾದ ವಿನೋದ್ ಲಾಯಿಲ,
ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷ ಸುರೇಶ್ ಪೂಜಾರಿ, ಗೆಳೆಯರ ಬಳಗ ಕಾಪಿನಡ್ಕ ಇದರ ಕಾರ್ಯದರ್ಶಿಯಾದ ಯತೀಶ್, ಶಿಕ್ಷಕಿ ಅನಿತಾ, ಮತ್ತು ಮಕ್ಕಳ ಪೋಷಕರು ಉಪಸ್ಥಿತಿತರಿದ್ದರು.


ಶಿಕ್ಷಕಿಯಾದ ಶಾಂತಿವಾಸ್ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿಯಾದ ಅನುಷಾ ವಂದಿಸಿದರು.

Related posts

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya
error: Content is protected !!