September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

ಶಿಶಿಲ: ಇತಿಹಾಸ ಪ್ರಸಿದ್ಧ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆಗೆ ಎರಡು ವರ್ಷಗಳಿಂದ ಮೀನ ಮೇಷ ನಡೆಯುತ್ತಿದೆ.

ಜೀರ್ಣೋದ್ಧಾರ ಮತ್ತು ಎರಡು ಬ್ರಹ್ಮಕಲಶವನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿರುವ ಕೀರ್ತಿ ಗ್ರಾಮಸ್ಥರಿದ್ದು. ಇದೀಗಿನ ರಾಜಕೀಯ ವ್ಯವಸ್ಥೆಯಿಂದ ಇನ್ನೂ ವ್ಯವಸ್ಥಾಪನಾ ಸಮಿತಿಯು ರಚನೆಯಾಗದೆ ಬಾಕಿಯಿರುವುದಾಗಿ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಿತಿ ಇಲ್ಲದೆ ದೇವಾಲಯದ ಎಲ್ಲಾ ಅಭಿವೃದ್ಧಿ ಕಾರ್ಯ ನಿಂತಿದೆ. ಸಾವಿರಾರು ಊರ‌ ಪರವೂರಿಂದ ಭಕ್ತಾದಿಗಳು ಬರುತ್ತಿದ್ದಾರೆ.ಅನ್ನ ದಾಸೊಹ ನಡೆಯುತ್ತಿದೆ. ಮತ್ಸ್ಯ ಸಂಕುಲಗಳಿದ್ದಾವೆ. ಕೃಷಿ ನಿರ್ವಹಣೆ ಆಗಬೇಕಾಗಿದೆ. ಹೀಗಿದ್ದರೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಆಯ್ಕೆ ಆಗಿದ್ದಾರೊ ಇಲ್ಲವೊ ಇನ್ನೂ ಮಾಹಿತಿ ಇಲ್ಲ. ಮುಜರಾಯಿ ಇಲಾಖೆಯನ್ನು ಸಂಪರ್ಕಿಸಿದರೆ ಜವಾಬ್ದಾರಿ ಉತ್ತರವಿಲ್ಲ. ಗ್ರಾಮದ ಊರ ಪರವೂರ ದಾನಿಗಳಿಂದಲೆ ಅಭಿವೃದ್ಧಿ ಆಗಿರುವ ಈ ಪುಣ್ಯಕ್ಷೇತ್ರಕ್ಕೆ ಈ ರೀತಿಯ ಸಮಿತಿ ರಚನೆಗೆ ಯಾಕೆ ತಡವಾಗುತ್ತಿದೆ ಎಂಬ ಮಾಹಿತಿ ಇಲ್ಲ.


ಆದುದರಿಂದ ಕೂಡಲೆ ವ್ಯವಸ್ಥಾಪನಾ ಸಮಿತಿ ರಚಿಸುವಂತೆ ಭಕ್ತರು ಆಗ್ರಹಿಸಿದ್ದಾರೆ ಹಾಗೂ ಮುಜರಾಯಿ ಇಲಾಖೆಗೂ ಮಾಹಿತಿ ನೀಡಿರುತ್ತಾರೆ.

ತಪ್ಪಿದ್ದಲ್ಲಿ ಗ್ರಾಮದ ಭಕ್ತಾಧಿಗಳೆ ಊರ ಭಕ್ತರ ಸಭೆ ಕರೆದು ಪ್ರತಿಭಟನೆಗೆ ಮುಂದಾಗುವುದಾಗಿ ಮಾಜಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯ ಮತ್ತು ಕರುಣಾಕರ ಶಿಶಿಲ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ಬಂಗಾಡಿ ಸ.ವ್ಯ. ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಗೌಡ ಸೇವಾ ನಿವೃತ್ತಿ

Suddi Udaya

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya
error: Content is protected !!