July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಗಬೇಕು ಆಗಾಗ ಬದುಕಿನೊಳಗೆ’ ತರಬೇತಿ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ನಗಬೇಕು ಆಗಾಗ ಬದುಕಿನೊಳಗೆ ಎಂಬ ವಿಶೇಷವಾದ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪುರಸ್ಕೃತ, ಕಲಾರತ್ನ ವಿಶ್ವನಾಥ ಶೆಟ್ಟಿ ಇವರು ತರಬೇತಿ ಕಾರ್ಯಕ್ರಮವನ್ನು ಸಂಗೀತ ಸಾಹಿತ್ಯದ ಮೂಲಕ ಹಲವು ನಿದರ್ಶನಗಳೊಂದಿಗೆ ನಡೆಸಿಕೊಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂತೋಷ್ ಸಲ್ಡಾನ ಅವರು ಮಾತನಾಡುತ್ತಾ ನಿರಂತರ ಕಾರ್ಯ ಒತ್ತಡದಿಂದಾಗಿ ನಮ್ಮ ಬದುಕಿನಲ್ಲಿ ನಗು ಮಾಯವಾಗುತ್ತಿದೆ ಮತ್ತು ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಇಂತಹ ತರಬೇತಿಗಳು ವಿದ್ಯಾರ್ಥಿಗಳ ಬದುಕಿನಲ್ಲಿ ಪುನಶ್ಚೇತನವನ್ನು ಉಂಟುಮಾಡುತ್ತದೆ ಎಂದು ಹೇಳಿದರು.
ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ ಗಾಯನ ತಮ್ಮ ಅನಿಸಿಕೆಯನ್ನು ತಿಳಿಸಿ, ಪ್ರಶಿಕ್ಷಣಾರ್ಥಿ ಸಾಯಿಧೃತಿ ಹಿನ್ನಲೆ ಸಂಗೀತ ಕೀಬೋರ್ಡ್ ನುಡಿಸಿ, ಸುಬ್ರಹ್ಮಣ್ಯ ರವರು ತಾಂತ್ರಿಕ ಸಹಾಯಕರಾಗಿ ಸಹಕರಿಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ನಾಯಕಿ ವೀಕ್ಷಾದೀಪ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಬಿ.ಎಡ್. ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದ ಮತ್ತು ಪ್ರಥಮ ಹಾಗೂ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಾದ ಶ್ವೇತಾ ಸ್ವಾಗತಿಸಿ, ಸ್ವಾತಿ ವಂದಿಸಿ, ವೈಷ್ಣವಿ ಕಾಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!