ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಗಬೇಕು ಆಗಾಗ ಬದುಕಿನೊಳಗೆ’ ತರಬೇತಿ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ನಗಬೇಕು ಆಗಾಗ ಬದುಕಿನೊಳಗೆ ಎಂಬ ವಿಶೇಷವಾದ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪುರಸ್ಕೃತ, ಕಲಾರತ್ನ ವಿಶ್ವನಾಥ ಶೆಟ್ಟಿ ಇವರು ತರಬೇತಿ ಕಾರ್ಯಕ್ರಮವನ್ನು ಸಂಗೀತ ಸಾಹಿತ್ಯದ ಮೂಲಕ ಹಲವು ನಿದರ್ಶನಗಳೊಂದಿಗೆ ನಡೆಸಿಕೊಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂತೋಷ್ ಸಲ್ಡಾನ ಅವರು ಮಾತನಾಡುತ್ತಾ ನಿರಂತರ ಕಾರ್ಯ ಒತ್ತಡದಿಂದಾಗಿ ನಮ್ಮ ಬದುಕಿನಲ್ಲಿ ನಗು ಮಾಯವಾಗುತ್ತಿದೆ ಮತ್ತು ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಇಂತಹ ತರಬೇತಿಗಳು ವಿದ್ಯಾರ್ಥಿಗಳ ಬದುಕಿನಲ್ಲಿ ಪುನಶ್ಚೇತನವನ್ನು ಉಂಟುಮಾಡುತ್ತದೆ ಎಂದು ಹೇಳಿದರು.
ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ ಗಾಯನ ತಮ್ಮ ಅನಿಸಿಕೆಯನ್ನು ತಿಳಿಸಿ, ಪ್ರಶಿಕ್ಷಣಾರ್ಥಿ ಸಾಯಿಧೃತಿ ಹಿನ್ನಲೆ ಸಂಗೀತ ಕೀಬೋರ್ಡ್ ನುಡಿಸಿ, ಸುಬ್ರಹ್ಮಣ್ಯ ರವರು ತಾಂತ್ರಿಕ ಸಹಾಯಕರಾಗಿ ಸಹಕರಿಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ನಾಯಕಿ ವೀಕ್ಷಾದೀಪ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಬಿ.ಎಡ್. ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದ ಮತ್ತು ಪ್ರಥಮ ಹಾಗೂ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಾದ ಶ್ವೇತಾ ಸ್ವಾಗತಿಸಿ, ಸ್ವಾತಿ ವಂದಿಸಿ, ವೈಷ್ಣವಿ ಕಾಯಕ್ರಮವನ್ನು ನಿರೂಪಿಸಿದರು.

Related posts

ನಾಳ: ಶ್ರೀವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya

ಮುಂದಿನ ತಲೆಮಾರಿನ ಫಾರ್ಮಸಿಸ್ಟ್ ಗಳಿಗೆ ವೃತ್ತಿ ಮಾರ್ಗದರ್ಶನ: ಪ್ರಸನ್ನಾ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಪ್ರೇರಣಾದಾಯಕ ಸೆಮಿನಾರ್

Suddi Udaya

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!