25 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

ಉಜಿರೆ: ಯುವಕರ ಆಸಕ್ತಿಗೆ ಅನುಗುಣವಾದ ಉದ್ಯೋಗಾವಕಾಶಗಳ ಲಭ್ಯತೆ ಮತ್ತು ಸದ್ಬಳಕೆಯಿಂದ ಭಾರತವು ವಿವಿಧ ರಂಗಗಳಲ್ಲಿ ವಿಶ್ವಮಟ್ಟದ ಸ್ಪರ್ಧೆಯನ್ನೊಡ್ಡಿ ಮುಂಚೂಣಿ ಸ್ಥಾನ ಗಳಿಸಬಹುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ) ಬಿ.ಸಿ. ಟ್ರಸ್ಟ್ ಸಿ.ಇ.ಒ. ಅನಿಲ್ ಕುಮಾರ್ ಎಸ್.ಎಸ್‌. ಅಭಿಪ್ರಾಯಪಟ್ಟರು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದಲ್ಲಿ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಬೆಂಗಳೂರಿನ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಹಾಗೂ ರಿಲಯನ್ಸ್ ಫೌಂಡೇಶನ್ ಸಹಯೋಗದಲ್ಲಿ ಆಯೋಜಿತ ಮೂರು ದಿನಗಳ ವೃತ್ತಿಪರ ತರಬೇತಿ ಕಾರ್ಯಾಗಾರವನ್ನು ಜೂ. 9ರಂದು ಉದ್ಘಾಟಿಸಿ ಮಾತನಾಡಿದರು.


ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದರೆ ಹೆಚ್ಚು ಸೃಜನಶೀಲತೆಯೊಂದಿಗೆ ತೊಡಗಿಸಿಕೊಳ್ಳಬಲ್ಲರು. ಸಮರ್ಪಣೆ ಭಾವದೊಂದಿಗೆ ಕಾರ್ಯನಿರ್ವಹಿಸಬಲ್ಲರು. ಇದರಿಂದ ನವೀನ ಆವಿಷ್ಕಾರ ಸಾಧ್ಯವಾಗುತ್ತದೆ. ಗುಣಮಟ್ಟದ ಉದ್ಯಮಶೀಲತೆ ರೂಢಿಯಾಗುತ್ತದೆ. ಈ ಮೂಲಕ ಜಾಗತಿಕ ಸ್ಪರ್ಧೆಗೆ ಬೇಕಾದ ಸಾಮರ್ಥ್ಯ ರೂಢಿಯಾಗುತ್ತದೆ ಎಂದರು.

ಮುಖ್ಯ ಅತಿಥಿ, ಮ್ಯಾಜಿಕ್ ಬಸ್ ಫೌಂಡೇಶನ್ ಎಂಸಿಎಸ್‌ಆರ್ ಪ್ರಾಜೆಕ್ಟ್ ಮ್ಯಾನೇಜರ್ ಧವನ್‌ ಗೌಡ ಮಾತನಾಡಿದರು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪಾತ್ರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರಲ್ಲಿನ ವ್ಯಾವಹಾರಿಕ ಕೌಶಲ್ಯ ಹಾಗೂ ಸಾಫ್ಟ್ ಸ್ಕಿಲ್ಸ್ ಅಭಿವೃದ್ಧಿಗೆ ಒತ್ತು ನೀಡುವುದು ಬಹಳ ಅಗತ್ಯವಾಗಿದೆ. ಸಮಾಜಕಾರ್ಯ ವೃತ್ತಿಯು ನೇರವಾಗಿ ಜನರ ಜೊತೆ ಸಂಪರ್ಕ ಹೊಂದಿರುವ ಕ್ಷೇತ್ರ.  ವಿದ್ಯಾರ್ಥಿಗಳು ಉತ್ತಮ ಗ್ರಹಿಸುವಿಕೆ, ಸಂವೇದನೆ, ಸ್ಪಷ್ಟ ಸಂವಹನ ಕೌಶಲ್ಯ, ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯ, ಸಮಯ ನಿರ್ವಹಣೆ, ಸಮಸ್ಯೆ ಪರಿಹಾರ ಗುಣ ಮತ್ತು ನಾಯಕತ್ವದ ಗುಣಗಳನ್ನು ಹೊಂದಿರುವುದು ಬಹು ಅಗತ್ಯವಾಗಿದೆ ಎಂದರು. 


ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪಠ್ಯಪುಸ್ತಕ ಜ್ಞಾನವಷ್ಟೇ ಮುಖ್ಯವಲ್ಲ. ಆತ್ಮವಿಶ್ವಾಸ ಹಾಗೂ ನಿರ್ಧಾರ ತೆಗೆದುಕೊಳ್ಳುವ ಧೈರ್ಯವು ವ್ಯಕ್ತಿತ್ವದ ಅವಿಭಾಜ್ಯ ಅಂಶಗಳು. ವೃತ್ತಿಪರ ಕೌಶಲ್ಯ ತರಬೇತಿ ಕಾರ್ಯಾಗಾರಗಳಿಂದ ಈ ಆತ್ಮವಿಶ್ವಾಸ, ಧೈರ್ಯ ಸಾಧ್ಯವಾಗುತ್ತದೆ ಎಂದರು.


ಈ ಸಂದರ್ಭದಲ್ಲಿ ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಡಾ. ರವಿಶಂಕರ್‌ ಕೆ.ಆರ್., ಪ್ರಾಧ್ಯಾಪಕರಾದ ಡಾ. ಅತುಲ್ ಎಸ್. ಸೆಮಿತ್, ಸ್ವಾತಿ  ಬಿ., ಡಾ. ದಾನೇಶ್ವರಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya
error: Content is protected !!