September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಜೂ.11 ರಂದು ನಡೆದ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರದಲ್ಲಿ ಉದ್ಘಾಟಕರಾಗಿ ಪಾಲ್ಗೊಂಡ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಮಾತನಾಡುತ್ತ, ನಮ್ಮ ದೈಹಿಕ ಕ್ಷಮತೆ ನಮ್ಮ ಮೂಳೆಯ ಮೇಲೆ ಅವಲಂಬಿತವಾಗಿರುತ್ತದೆ. ಸದೃಢವಾದ ಎಲುಬು ಮತ್ತು ಮೂಳೆಗಳಿಂದ ನಮ್ಮ ದೇಹವೂ ಕೂಡ ಸದೃಢವಾಗಿರುತ್ತದೆ. ಅದಕ್ಕಾಗಿ ವರ್ಷಕೊಮ್ಮೆಯಾದರೂ ನಾವು ಇಂಥ ಶಿಬಿರದಲ್ಲಿ ಪಾಲ್ಗೊಂಡು ನಮ್ಮ ಮೂಳೆ ಸಾಂದ್ರತೆಯನ್ನು ಪರೀಕ್ಷಿಸಿ ನಿಖರವಾದ ದೃಢತೆಯನ್ನು ತಿಳಿದು ಏನಾದರೂ ಕೊರತೆಯಿದ್ದಲ್ಲಿ ತಜ್ಞ ವೈದ್ಯರಿಂದ ಸೂಕ್ತ ಪರಿಹಾರ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿ ಈ ಕಾರ್ಯಕ್ರಮದ ಪ್ರಯೋಜನವನ್ನು ಹೆಚ್ಚು ಹೆಚ್ಚಾಗಿ ಪಡೆದುಕೂಳ್ಳಬೇಕೆಂದು ಕರೆ ನೀಡಿದರು.


ಬೆನಕ ಆಸ್ಪತ್ರೆಯ ಎಲುಬು ಕೀಲು ತಜ್ಞರು ಮತ್ತು ಕೈ ಮೈಕ್ರೋಸರ್ಜರಿ ಪರಿಣಿತರಾದ ಡಾ. ರೋಹಿತ್ ಜಿ.ಕೆ. ಯವರು ಮಾತನಾಡುತ್ತ ನಮ್ಮ ಆರೋಗ್ಯದ ಮೇಲೆ ಮೂಳೆ ಸಾಂದ್ರತೆ ಯಾವ ರೀತಿ ಪರಿಣಾಮವನ್ನು ಬೀಳುತ್ತದೆ ಎಂದು ಉದಾಹರಣೆಗಳ ಸಮೇತ ವಿವರಿಸಿದರು. ಮತ್ತು ಎಲುಬು ಮೂಳೆಗಳ ಕಡಿಮೆ ಕ್ಷಮತೆಯಿಂದ ಯಾವ ರೀತಿಯ ಸಮಸ್ಯೆಗಳು ನಮ್ಮ ಶರೀರದ ಮೇಲೆ ಆಗುತ್ತದೆಂದು ವಿವರಣೆ ನೀಡಿದರು.


ಡಾ. ಭಾರತಿ ಜಿ.ಕೆ. ಕಾರ್ಯಕ್ರಮದ ಪ್ರಸ್ತಾವನೆಗೈದು ವಂದಿಸಿದರು. ಆಸ್ಪತ್ರೆಯ ಪಿಆರ್‌ಒ ಎಸ್.ಜಿ. ಭಟ್ ಸ್ವಾಗತಿಸಿ ನಿರೂಪಿಸಿದರು.

Related posts

ಕಡಿರುದ್ಯಾವರ: ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗ ಸಂಚಾರ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವ ರೂ. 6 ಕೋಟಿ ವೆಚ್ಚದ ನೂತನವಾಗಿ ನಿರ್ಮಿಸಲಾದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಎ.20 ರಂದು ಶೃಂಗೇರಿ ಮಠದ ಶ್ರೀಮಜ್ಜದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರಿಂದ ಲೋಕಾರ್ಪಣೆ

Suddi Udaya

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya
error: Content is protected !!