25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಜೂ.11 ರಂದು ನಡೆದ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರದಲ್ಲಿ ಉದ್ಘಾಟಕರಾಗಿ ಪಾಲ್ಗೊಂಡ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಮಾತನಾಡುತ್ತ, ನಮ್ಮ ದೈಹಿಕ ಕ್ಷಮತೆ ನಮ್ಮ ಮೂಳೆಯ ಮೇಲೆ ಅವಲಂಬಿತವಾಗಿರುತ್ತದೆ. ಸದೃಢವಾದ ಎಲುಬು ಮತ್ತು ಮೂಳೆಗಳಿಂದ ನಮ್ಮ ದೇಹವೂ ಕೂಡ ಸದೃಢವಾಗಿರುತ್ತದೆ. ಅದಕ್ಕಾಗಿ ವರ್ಷಕೊಮ್ಮೆಯಾದರೂ ನಾವು ಇಂಥ ಶಿಬಿರದಲ್ಲಿ ಪಾಲ್ಗೊಂಡು ನಮ್ಮ ಮೂಳೆ ಸಾಂದ್ರತೆಯನ್ನು ಪರೀಕ್ಷಿಸಿ ನಿಖರವಾದ ದೃಢತೆಯನ್ನು ತಿಳಿದು ಏನಾದರೂ ಕೊರತೆಯಿದ್ದಲ್ಲಿ ತಜ್ಞ ವೈದ್ಯರಿಂದ ಸೂಕ್ತ ಪರಿಹಾರ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿ ಈ ಕಾರ್ಯಕ್ರಮದ ಪ್ರಯೋಜನವನ್ನು ಹೆಚ್ಚು ಹೆಚ್ಚಾಗಿ ಪಡೆದುಕೂಳ್ಳಬೇಕೆಂದು ಕರೆ ನೀಡಿದರು.


ಬೆನಕ ಆಸ್ಪತ್ರೆಯ ಎಲುಬು ಕೀಲು ತಜ್ಞರು ಮತ್ತು ಕೈ ಮೈಕ್ರೋಸರ್ಜರಿ ಪರಿಣಿತರಾದ ಡಾ. ರೋಹಿತ್ ಜಿ.ಕೆ. ಯವರು ಮಾತನಾಡುತ್ತ ನಮ್ಮ ಆರೋಗ್ಯದ ಮೇಲೆ ಮೂಳೆ ಸಾಂದ್ರತೆ ಯಾವ ರೀತಿ ಪರಿಣಾಮವನ್ನು ಬೀಳುತ್ತದೆ ಎಂದು ಉದಾಹರಣೆಗಳ ಸಮೇತ ವಿವರಿಸಿದರು. ಮತ್ತು ಎಲುಬು ಮೂಳೆಗಳ ಕಡಿಮೆ ಕ್ಷಮತೆಯಿಂದ ಯಾವ ರೀತಿಯ ಸಮಸ್ಯೆಗಳು ನಮ್ಮ ಶರೀರದ ಮೇಲೆ ಆಗುತ್ತದೆಂದು ವಿವರಣೆ ನೀಡಿದರು.


ಡಾ. ಭಾರತಿ ಜಿ.ಕೆ. ಕಾರ್ಯಕ್ರಮದ ಪ್ರಸ್ತಾವನೆಗೈದು ವಂದಿಸಿದರು. ಆಸ್ಪತ್ರೆಯ ಪಿಆರ್‌ಒ ಎಸ್.ಜಿ. ಭಟ್ ಸ್ವಾಗತಿಸಿ ನಿರೂಪಿಸಿದರು.

Related posts

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಬಂದಾರು: ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ- ಕಾರ್ಯಾಲಯ ಉದ್ಘಾಟನೆ, ವೆಬ್‌ಸೈಟ್ ಅನಾವರಣ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya
error: Content is protected !!