March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆಯು ಜೂ.10 ರಂದು ವಲಯದ ಅಧ್ಯಕ್ಷೆ ವಸಂತಿ ಲಕ್ಷ್ಮಣ್ ಇವರ ಅಧ್ಯಕ್ಷತೆಯಲ್ಲಿ ಮಡಂತ್ಯಾರು ಮಹಿಳಾ ಮಂಡಲ ಕಟ್ಟಡದಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಟೈಲರ್ಸ್ ಅಸೋಸಿಯೇಷನ್ ಅಧ್ಯಕ್ಷೆ ವಿದ್ಯಾ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಜಯಂತ್ ಉರ್ಲಾಂಡಿ, ಕ್ಷೇತ್ರ ಸಮಿತಿ ಅಧ್ಯಕ್ಷೆ ವೇದಾವತಿ ಜನಾರ್ಧನ್, ಕಾರ್ಯದರ್ಶಿ ನಾಗೇಶ್, ಜಿಲ್ಲಾ ಉಪಾಧ್ಯಕ್ಷೆ ಶಾಂಭವಿ ಪಿ ಬಂಗೇರ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ ನವೀನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರಾಧ್ಯಕ್ಷರಾಗಿ ಲಿಂಗಪ್ಪ ಟೈಲರ್ ಪುಂಜಾಲಕಟ್ಟೆ, ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್ ಅವರು ಪುನರಾಯ್ಕೆಗೊಂಡರು. ಕಾರ್ಯದರ್ಶಿಯಾಗಿ ಸುಮಲತಾ, ಕೋಶಾಧಿಕಾರಿಯಾಗಿ ಸವಿತಾ, ಉಪಾಧ್ಯಕ್ಷರಾಗಿ ಜಾರಪ್ಪ ಟೈಲರ್ ಬಳ್ಳಮಂಜ, ಹಾಗೂ ಕ್ಷೇತ್ರ ಸಮಿತಿಗೆ ಶಶಿಕಲಾ ಗೋಪಾಲ್ ಪುಂಜಾಲಕಟ್ಟೆ, ಪ್ರಮೀಳಾ ಉಮೇಶ್ ಹಾರಬೆ, ಸಂಗೀತ ಶೆಟ್ಟಿ ಮಡಂತ್ಯಾರು, ಯಶೋಧ ಪೂಂಜಾ, ಆಶಾಲತಾ ಇವರನ್ನು ಆಯ್ಕೆ ಮಾಡಲಾಯಿತು.


ಈ ಸಂದರ್ಭದಲ್ಲಿ ಹೊಸ ಸದಸ್ಯರ ಸೇರ್ಪಡೆ ಸದಸ್ಯರ ಐಡಿ ಕಾರ್ಡ್ ನವೀಕರಣ ಹಾಗೂ ಐಡಿ ಕಾರ್ಡ್ ವಿತರಣೆ ಮಾಡಲಾಯಿತು. ಪ್ರಮೀಳಾ ಉಮೇಶ್ ಕಾರ್ಯಕ್ರಮ ನಿರೂಪಿಸಿ, ಸಂಗೀತ ಶೆಟ್ಟಿ ಸ್ವಾಗತಿಸಿದರು. ಸುಮಲತಾ ಧನ್ಯವಾದ ನೀಡಿದರು. ಕಾರ್ಯಕ್ರಮದ ನಂತರ ಸದಸ್ಯರಿಗೆ ಆಟೋಟ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು.

Related posts

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya

ಸೆ.12 : ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಿರುದ್ಯೋಗಿ ವಿಕಲಚೇತನರ ಉದ್ಯೋಗ ಪೂರ್ವ ಕೌಶಲ್ಯ ಶಿಬಿರ- ಉದ್ಯೋಗ ಆಯ್ಕೆ

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya
error: Content is protected !!