ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

ಪೆರೋಡಿತ್ತಾಯಕಟ್ಟೆ; ಸ.ಉ.ಪ್ರಾ ಶಾಲೆ ಪೆರೋಡಿತ್ತಾಯಕಟ್ಟೆ, ಇಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಹಳೆವಿದ್ಯಾರ್ಥಿ ಸಂಘ, ಶಾಲಾ ವಿದ್ಯಾಭಿಮಾನಿಗಳ, ಹಾಗೂ ದಾನಿಗಳ ಸಹಕಾರದಿಂದ ಎಸ್‌.ಡಿ.ಎಂ.ಸಿ ಅಧ್ಯಕ್ಷ ಮುಸ್ತಫಾ ರವರ ನೇತೃತ್ವದಲ್ಲಿ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಯ ಅಧ್ಯಕ್ಷ ಮುಸ್ತಫ ರವರು ವಹಿಸಿದ್ದು, ಬಳಂಜ ಗ್ರಾಮ ಪಂಚಾಯತ್ ನ ಸದಸ್ಯರಾದ ನಿಜಾಮುದ್ದೀನ್ ಹಾಗೂ ಶ್ರೀಮತಿ ಲೀಲಾವತಿಯವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ನೇಸರ, ಪೆರೋಡಿತ್ತಾಯಕಟ್ಟೆ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಸ್ಫೂರ್ತಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಬೆನೆಡಿಕ್ಟಾ ಪಾಯಿಸ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು, ಸ್ಲೇಟ್ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.

ನಂತರ ಶಾಲಾ ಅಭಿವೃದ್ಧಿಗೆ ಶ್ರಮಿಸಿದ ಬಳಂಜ ಗ್ರಾಮ ಪಂಚಾಯತ್‌ ಸದಸ್ಯರಾದ ನಿಜಾಮುದ್ದೀನ್, ಶ್ರೀಮತಿ ಪ್ರಸನ್ನ ಹಾಗೂ ಶ್ರೀಮತಿ ಲೀಲಾವತಿ ಯವರನ್ನು ಶಾಲಾ ಅಭಿವೃದ್ಧಿ ಸಮಿತಿಯ ಪರವಾಗಿ ಸನ್ಮಾನಿಸಲಾಯಿತು.

ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದ ಸಮಸ್ತ ವಿದ್ಯಾಭಿಮಾನಿಗಳಿಗೆ ಕೃತಜ್ಞತೆಗಳನ್ನು ಸಮರ್ಪಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಸಹ ಶಿಕ್ಷಕರಾದ ರಾಜೇಶ್ ರವರು ನಿರೂಪಿಸಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಬೆನೆಡಿಕ್ಟಾ ಪಾಯಿಸ್ ಸ್ವಾಗತಿಸಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ದೇವಿಕಾ ವಂದಿಸಿದರು.

Related posts

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ: ಎಸ್ಡಿಪಿಐ ಮುಖಂಡರಿಂದ ಸಮಸ್ಯೆ ಬಗೆಹರಿಸಲು ಮನವಿ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರಿಂದ “ಕಲಾಟಿಯನ್ ಟೈಗರ್ಸ್” ಲೋಗೋ ಅನಾವರಣ

Suddi Udaya

ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ 52 ಸಂವತ್ಸರಗಳನ್ನು ಪೂರೈಸಿದ ಬೆಳ್ತಂಗಡಿ ಲಯನ್ಸ್ ಕ್ಲಬ್-ಮಾ.22: ಲಯನ್ಸ್ ಸೇವಾ ಭವನದ ಉದ್ಘಾಟನಾ ಸಮಾರಂಭ

Suddi Udaya

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

Suddi Udaya
error: Content is protected !!