25 C
ಪುತ್ತೂರು, ಬೆಳ್ತಂಗಡಿ
June 14, 2025
ತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

ಬೆಳ್ತಂಗಡಿ: ಮಳೆಗಾಲದ ಅವಧಿಯಲ್ಲಿ ಉಂಟಾಗಬಹುದಾದ ವಿಪತ್ತುಗಳ ನಿರ್ವಹಣೆಗಾಗಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ಸಭೆ ನಡೆಸಿ ನೀಡಿರುವ ಆದೇಶದಂತೆ ಗುಡ್ಡ ಜರಿತ ಉಂಟಾಗಬಹುದಾದ ಸ್ಥಳದಲ್ಲಿ ಅಥವಾ ಹೊಳೆ/ತೊರೆ ಬದಿಯಲ್ಲಿರುವ ಮನೆಗಳವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005ರಂತೆ ಗ್ರಾಮ ಪಂಚಾಯತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು ನೋಟೀಸನ್ನು ನೀಡುತ್ತಿದ್ದಾರೆ.
ಅಳದಂಗಡಿ, ಬಾರ್ಯ ಬೆಳಾಲು ಧರ್ಮಸ್ಥಳ ಕಳಿಯ ಕಾಶಿಪಟ್ಣ ಕೊಕ್ಕಡ ಕೊಯ್ಯುರು ಮಚ್ಚಿನ ಮಾಲಾಡಿ ಮಲವಂತಿಗೆ ಮರೋಡಿ ಮುಂಡಾಜೆ ನಾರಾವಿ ಪಡಂಗಡಿ ತೆಕ್ಕಾರು ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈವರೆಗೆ ಸುಮಾರು 190 ಕುಟುಂಬಗಳಿಗೆ ನೋಟೀಸನ್ನು ನೀಡಿ ಅಧಿಕ ಮಳೆಯಾದ ಸಂದರ್ಭದಲ್ಲಿ ತೆರೆಯಲಾಗುವ ಕಾಳಜಿ ಕೇಂದ್ರಗಳಿಗೆ ಅಥವಾ ಸಂಬಂಧಿಕರ ಮನೆಗಳಿಗೆ ತೆರಳುವಂತೆ ಸೂಚಿಸಲಾಗಿದೆ. ನೋಟಿಸು ನೀಡುವ ಕಾರ್ಯ ಮುಂದುವರಿದಿದೆ.
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 6 ಮನೆಗಳಿಗೆ ನೋಟೀಸು ನೀಡಲಾಗಿದೆ.

Related posts

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya
error: Content is protected !!