July 23, 2026
ತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

ಬೆಳ್ತಂಗಡಿ: ಮಳೆಗಾಲದ ಅವಧಿಯಲ್ಲಿ ಉಂಟಾಗಬಹುದಾದ ವಿಪತ್ತುಗಳ ನಿರ್ವಹಣೆಗಾಗಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ಸಭೆ ನಡೆಸಿ ನೀಡಿರುವ ಆದೇಶದಂತೆ ಗುಡ್ಡ ಜರಿತ ಉಂಟಾಗಬಹುದಾದ ಸ್ಥಳದಲ್ಲಿ ಅಥವಾ ಹೊಳೆ/ತೊರೆ ಬದಿಯಲ್ಲಿರುವ ಮನೆಗಳವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005ರಂತೆ ಗ್ರಾಮ ಪಂಚಾಯತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು ನೋಟೀಸನ್ನು ನೀಡುತ್ತಿದ್ದಾರೆ.
ಅಳದಂಗಡಿ, ಬಾರ್ಯ ಬೆಳಾಲು ಧರ್ಮಸ್ಥಳ ಕಳಿಯ ಕಾಶಿಪಟ್ಣ ಕೊಕ್ಕಡ ಕೊಯ್ಯುರು ಮಚ್ಚಿನ ಮಾಲಾಡಿ ಮಲವಂತಿಗೆ ಮರೋಡಿ ಮುಂಡಾಜೆ ನಾರಾವಿ ಪಡಂಗಡಿ ತೆಕ್ಕಾರು ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈವರೆಗೆ ಸುಮಾರು 190 ಕುಟುಂಬಗಳಿಗೆ ನೋಟೀಸನ್ನು ನೀಡಿ ಅಧಿಕ ಮಳೆಯಾದ ಸಂದರ್ಭದಲ್ಲಿ ತೆರೆಯಲಾಗುವ ಕಾಳಜಿ ಕೇಂದ್ರಗಳಿಗೆ ಅಥವಾ ಸಂಬಂಧಿಕರ ಮನೆಗಳಿಗೆ ತೆರಳುವಂತೆ ಸೂಚಿಸಲಾಗಿದೆ. ನೋಟಿಸು ನೀಡುವ ಕಾರ್ಯ ಮುಂದುವರಿದಿದೆ.
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 6 ಮನೆಗಳಿಗೆ ನೋಟೀಸು ನೀಡಲಾಗಿದೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರರವರ ತಂಡದ ಸದಸ್ಯರಿಂದ ನವರಾತ್ರಿಯ ವಿಶೇಷ ಭಜನೆ

Suddi Udaya

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya
error: Content is protected !!