March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ (ರಿ.) ಬೆಳ್ತಂಗಡಿ ಇದರ ವತಿಯಿಂದ ಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಹತ್ಯಡ್ಕದ ಒಕ್ಕಲಿಗ ಗೌಡ ಸಮಾಜದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರು ಆಸ್ಪತ್ರೆಯ ಬಿಲ್‌ ಪಾವತಿಸಲು ಅಶಕ್ತರಾಗಿದ್ದು, ಈ ಬಗ್ಗೆ ಸೇವಾ ಟ್ರಸ್ಟ್‌ ಗೆ ಮನವಿ ಮಾಡಿದಾಗ ಆ ಕೂಡಲೇ ಸ್ಪಂದಿಸಿ, ಒಕ್ಕಲಿಗ ಸಮುದಾಯದ ಸದಸ್ಯರಿಂದ ಸಂಗ್ರಹಿಸಿದ ಮೊತ್ತವಾದ ರೂ. 30 ಸಾವಿರ ಮೊತ್ತವನ್ನು ಟ್ರಸ್ಟಿನ ಹತ್ತನೇ ಸೇವಾ ಯೋಜನೆ ಅಡಿಯಲ್ಲಿ ಚಿಕಿತ್ಸೆಗೊಳಪಟ್ಟ ಸುಬ್ರಾಯ ಗೌಡ ಹತ್ಯಡ್ಕ ರವರ ಮನೆಗೆ ತೆರಳಿ ಟ್ರಸ್ಟಿನ ಸ್ಥಾಪಕ ಟ್ರಸ್ಟಿಗಳು ಟ್ರಸ್ಟಿನ ಚೆಕ್ಕನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಸ್ಥಾಪಕ ಟ್ರಸ್ಟಿಗಳಾದ ರಂಜನ್ ಜಿ ಗೌಡ, ಶ್ರೀನಿವಾಸ್‌ ಗೌಡ ಬೆಳಾಲು, ಭರತ್ ಗೌಡ ಬಂಗಾಡಿ, ನವೀನ್ ಬಿ.ಕೆ ವಕೀಲರು, ಸೂರಜ್ ಗೌಡ ವಳಂಬ್ರ ಹಾಗೂ ಟ್ರಸ್ಟಿಗಳಾದ ಸುಂದರ ಗೌಡ ಉಡೈರೆ ಮತ್ತು ಧರ್ಮರಾಜ ಗೌಡ ಅಡ್ಕಡಿ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ನಾಳೆ (ಮಾ.1): ಕಕ್ಕಿಂಜೆ ವಿದ್ಯುತ್‌ ನಿಲುಗಡೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya
error: Content is protected !!