25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ (ರಿ.) ಬೆಳ್ತಂಗಡಿ ಇದರ ವತಿಯಿಂದ ಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಹತ್ಯಡ್ಕದ ಒಕ್ಕಲಿಗ ಗೌಡ ಸಮಾಜದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರು ಆಸ್ಪತ್ರೆಯ ಬಿಲ್‌ ಪಾವತಿಸಲು ಅಶಕ್ತರಾಗಿದ್ದು, ಈ ಬಗ್ಗೆ ಸೇವಾ ಟ್ರಸ್ಟ್‌ ಗೆ ಮನವಿ ಮಾಡಿದಾಗ ಆ ಕೂಡಲೇ ಸ್ಪಂದಿಸಿ, ಒಕ್ಕಲಿಗ ಸಮುದಾಯದ ಸದಸ್ಯರಿಂದ ಸಂಗ್ರಹಿಸಿದ ಮೊತ್ತವಾದ ರೂ. 30 ಸಾವಿರ ಮೊತ್ತವನ್ನು ಟ್ರಸ್ಟಿನ ಹತ್ತನೇ ಸೇವಾ ಯೋಜನೆ ಅಡಿಯಲ್ಲಿ ಚಿಕಿತ್ಸೆಗೊಳಪಟ್ಟ ಸುಬ್ರಾಯ ಗೌಡ ಹತ್ಯಡ್ಕ ರವರ ಮನೆಗೆ ತೆರಳಿ ಟ್ರಸ್ಟಿನ ಸ್ಥಾಪಕ ಟ್ರಸ್ಟಿಗಳು ಟ್ರಸ್ಟಿನ ಚೆಕ್ಕನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಸ್ಥಾಪಕ ಟ್ರಸ್ಟಿಗಳಾದ ರಂಜನ್ ಜಿ ಗೌಡ, ಶ್ರೀನಿವಾಸ್‌ ಗೌಡ ಬೆಳಾಲು, ಭರತ್ ಗೌಡ ಬಂಗಾಡಿ, ನವೀನ್ ಬಿ.ಕೆ ವಕೀಲರು, ಸೂರಜ್ ಗೌಡ ವಳಂಬ್ರ ಹಾಗೂ ಟ್ರಸ್ಟಿಗಳಾದ ಸುಂದರ ಗೌಡ ಉಡೈರೆ ಮತ್ತು ಧರ್ಮರಾಜ ಗೌಡ ಅಡ್ಕಡಿ ಉಪಸ್ಥಿತರಿದ್ದರು.

Related posts

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya
error: Content is protected !!