22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಗಬೇಕು ಆಗಾಗ ಬದುಕಿನೊಳಗೆ’ ತರಬೇತಿ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ನಗಬೇಕು ಆಗಾಗ ಬದುಕಿನೊಳಗೆ ಎಂಬ ವಿಶೇಷವಾದ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪುರಸ್ಕೃತ, ಕಲಾರತ್ನ ವಿಶ್ವನಾಥ ಶೆಟ್ಟಿ ಇವರು ತರಬೇತಿ ಕಾರ್ಯಕ್ರಮವನ್ನು ಸಂಗೀತ ಸಾಹಿತ್ಯದ ಮೂಲಕ ಹಲವು ನಿದರ್ಶನಗಳೊಂದಿಗೆ ನಡೆಸಿಕೊಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂತೋಷ್ ಸಲ್ಡಾನ ಅವರು ಮಾತನಾಡುತ್ತಾ ನಿರಂತರ ಕಾರ್ಯ ಒತ್ತಡದಿಂದಾಗಿ ನಮ್ಮ ಬದುಕಿನಲ್ಲಿ ನಗು ಮಾಯವಾಗುತ್ತಿದೆ ಮತ್ತು ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಇಂತಹ ತರಬೇತಿಗಳು ವಿದ್ಯಾರ್ಥಿಗಳ ಬದುಕಿನಲ್ಲಿ ಪುನಶ್ಚೇತನವನ್ನು ಉಂಟುಮಾಡುತ್ತದೆ ಎಂದು ಹೇಳಿದರು.
ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ ಗಾಯನ ತಮ್ಮ ಅನಿಸಿಕೆಯನ್ನು ತಿಳಿಸಿ, ಪ್ರಶಿಕ್ಷಣಾರ್ಥಿ ಸಾಯಿಧೃತಿ ಹಿನ್ನಲೆ ಸಂಗೀತ ಕೀಬೋರ್ಡ್ ನುಡಿಸಿ, ಸುಬ್ರಹ್ಮಣ್ಯ ರವರು ತಾಂತ್ರಿಕ ಸಹಾಯಕರಾಗಿ ಸಹಕರಿಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ನಾಯಕಿ ವೀಕ್ಷಾದೀಪ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಬಿ.ಎಡ್. ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದ ಮತ್ತು ಪ್ರಥಮ ಹಾಗೂ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಾದ ಶ್ವೇತಾ ಸ್ವಾಗತಿಸಿ, ಸ್ವಾತಿ ವಂದಿಸಿ, ವೈಷ್ಣವಿ ಕಾಯಕ್ರಮವನ್ನು ನಿರೂಪಿಸಿದರು.

Related posts

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya

ಅನಾರು : ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: “ಅನಾರ್ ಡ್ ಓಂಕಾರ್” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!