22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಜೂ.11 ರಂದು ನಡೆದ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರದಲ್ಲಿ ಉದ್ಘಾಟಕರಾಗಿ ಪಾಲ್ಗೊಂಡ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಮಾತನಾಡುತ್ತ, ನಮ್ಮ ದೈಹಿಕ ಕ್ಷಮತೆ ನಮ್ಮ ಮೂಳೆಯ ಮೇಲೆ ಅವಲಂಬಿತವಾಗಿರುತ್ತದೆ. ಸದೃಢವಾದ ಎಲುಬು ಮತ್ತು ಮೂಳೆಗಳಿಂದ ನಮ್ಮ ದೇಹವೂ ಕೂಡ ಸದೃಢವಾಗಿರುತ್ತದೆ. ಅದಕ್ಕಾಗಿ ವರ್ಷಕೊಮ್ಮೆಯಾದರೂ ನಾವು ಇಂಥ ಶಿಬಿರದಲ್ಲಿ ಪಾಲ್ಗೊಂಡು ನಮ್ಮ ಮೂಳೆ ಸಾಂದ್ರತೆಯನ್ನು ಪರೀಕ್ಷಿಸಿ ನಿಖರವಾದ ದೃಢತೆಯನ್ನು ತಿಳಿದು ಏನಾದರೂ ಕೊರತೆಯಿದ್ದಲ್ಲಿ ತಜ್ಞ ವೈದ್ಯರಿಂದ ಸೂಕ್ತ ಪರಿಹಾರ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿ ಈ ಕಾರ್ಯಕ್ರಮದ ಪ್ರಯೋಜನವನ್ನು ಹೆಚ್ಚು ಹೆಚ್ಚಾಗಿ ಪಡೆದುಕೂಳ್ಳಬೇಕೆಂದು ಕರೆ ನೀಡಿದರು.


ಬೆನಕ ಆಸ್ಪತ್ರೆಯ ಎಲುಬು ಕೀಲು ತಜ್ಞರು ಮತ್ತು ಕೈ ಮೈಕ್ರೋಸರ್ಜರಿ ಪರಿಣಿತರಾದ ಡಾ. ರೋಹಿತ್ ಜಿ.ಕೆ. ಯವರು ಮಾತನಾಡುತ್ತ ನಮ್ಮ ಆರೋಗ್ಯದ ಮೇಲೆ ಮೂಳೆ ಸಾಂದ್ರತೆ ಯಾವ ರೀತಿ ಪರಿಣಾಮವನ್ನು ಬೀಳುತ್ತದೆ ಎಂದು ಉದಾಹರಣೆಗಳ ಸಮೇತ ವಿವರಿಸಿದರು. ಮತ್ತು ಎಲುಬು ಮೂಳೆಗಳ ಕಡಿಮೆ ಕ್ಷಮತೆಯಿಂದ ಯಾವ ರೀತಿಯ ಸಮಸ್ಯೆಗಳು ನಮ್ಮ ಶರೀರದ ಮೇಲೆ ಆಗುತ್ತದೆಂದು ವಿವರಣೆ ನೀಡಿದರು.


ಡಾ. ಭಾರತಿ ಜಿ.ಕೆ. ಕಾರ್ಯಕ್ರಮದ ಪ್ರಸ್ತಾವನೆಗೈದು ವಂದಿಸಿದರು. ಆಸ್ಪತ್ರೆಯ ಪಿಆರ್‌ಒ ಎಸ್.ಜಿ. ಭಟ್ ಸ್ವಾಗತಿಸಿ ನಿರೂಪಿಸಿದರು.

Related posts

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

Suddi Udaya

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ನಿಡ್ಲೆ: ಮುಳಂಪಾಯ ಲಕ್ಷ್ಮಿ ದೇವಧರ್ ನಿಧನ

Suddi Udaya
error: Content is protected !!