23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಜೂ.11 ರಂದು ನಡೆದ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರದಲ್ಲಿ ಉದ್ಘಾಟಕರಾಗಿ ಪಾಲ್ಗೊಂಡ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಮಾತನಾಡುತ್ತ, ನಮ್ಮ ದೈಹಿಕ ಕ್ಷಮತೆ ನಮ್ಮ ಮೂಳೆಯ ಮೇಲೆ ಅವಲಂಬಿತವಾಗಿರುತ್ತದೆ. ಸದೃಢವಾದ ಎಲುಬು ಮತ್ತು ಮೂಳೆಗಳಿಂದ ನಮ್ಮ ದೇಹವೂ ಕೂಡ ಸದೃಢವಾಗಿರುತ್ತದೆ. ಅದಕ್ಕಾಗಿ ವರ್ಷಕೊಮ್ಮೆಯಾದರೂ ನಾವು ಇಂಥ ಶಿಬಿರದಲ್ಲಿ ಪಾಲ್ಗೊಂಡು ನಮ್ಮ ಮೂಳೆ ಸಾಂದ್ರತೆಯನ್ನು ಪರೀಕ್ಷಿಸಿ ನಿಖರವಾದ ದೃಢತೆಯನ್ನು ತಿಳಿದು ಏನಾದರೂ ಕೊರತೆಯಿದ್ದಲ್ಲಿ ತಜ್ಞ ವೈದ್ಯರಿಂದ ಸೂಕ್ತ ಪರಿಹಾರ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿ ಈ ಕಾರ್ಯಕ್ರಮದ ಪ್ರಯೋಜನವನ್ನು ಹೆಚ್ಚು ಹೆಚ್ಚಾಗಿ ಪಡೆದುಕೂಳ್ಳಬೇಕೆಂದು ಕರೆ ನೀಡಿದರು.


ಬೆನಕ ಆಸ್ಪತ್ರೆಯ ಎಲುಬು ಕೀಲು ತಜ್ಞರು ಮತ್ತು ಕೈ ಮೈಕ್ರೋಸರ್ಜರಿ ಪರಿಣಿತರಾದ ಡಾ. ರೋಹಿತ್ ಜಿ.ಕೆ. ಯವರು ಮಾತನಾಡುತ್ತ ನಮ್ಮ ಆರೋಗ್ಯದ ಮೇಲೆ ಮೂಳೆ ಸಾಂದ್ರತೆ ಯಾವ ರೀತಿ ಪರಿಣಾಮವನ್ನು ಬೀಳುತ್ತದೆ ಎಂದು ಉದಾಹರಣೆಗಳ ಸಮೇತ ವಿವರಿಸಿದರು. ಮತ್ತು ಎಲುಬು ಮೂಳೆಗಳ ಕಡಿಮೆ ಕ್ಷಮತೆಯಿಂದ ಯಾವ ರೀತಿಯ ಸಮಸ್ಯೆಗಳು ನಮ್ಮ ಶರೀರದ ಮೇಲೆ ಆಗುತ್ತದೆಂದು ವಿವರಣೆ ನೀಡಿದರು.


ಡಾ. ಭಾರತಿ ಜಿ.ಕೆ. ಕಾರ್ಯಕ್ರಮದ ಪ್ರಸ್ತಾವನೆಗೈದು ವಂದಿಸಿದರು. ಆಸ್ಪತ್ರೆಯ ಪಿಆರ್‌ಒ ಎಸ್.ಜಿ. ಭಟ್ ಸ್ವಾಗತಿಸಿ ನಿರೂಪಿಸಿದರು.

Related posts

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya

ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya
error: Content is protected !!