ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

ಪೆರೋಡಿತ್ತಾಯಕಟ್ಟೆ; ಸ.ಉ.ಪ್ರಾ ಶಾಲೆ ಪೆರೋಡಿತ್ತಾಯಕಟ್ಟೆ, ಇಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಹಳೆವಿದ್ಯಾರ್ಥಿ ಸಂಘ, ಶಾಲಾ ವಿದ್ಯಾಭಿಮಾನಿಗಳ, ಹಾಗೂ ದಾನಿಗಳ ಸಹಕಾರದಿಂದ ಎಸ್‌.ಡಿ.ಎಂ.ಸಿ ಅಧ್ಯಕ್ಷ ಮುಸ್ತಫಾ ರವರ ನೇತೃತ್ವದಲ್ಲಿ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಯ ಅಧ್ಯಕ್ಷ ಮುಸ್ತಫ ರವರು ವಹಿಸಿದ್ದು, ಬಳಂಜ ಗ್ರಾಮ ಪಂಚಾಯತ್ ನ ಸದಸ್ಯರಾದ ನಿಜಾಮುದ್ದೀನ್ ಹಾಗೂ ಶ್ರೀಮತಿ ಲೀಲಾವತಿಯವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ನೇಸರ, ಪೆರೋಡಿತ್ತಾಯಕಟ್ಟೆ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಸ್ಫೂರ್ತಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಬೆನೆಡಿಕ್ಟಾ ಪಾಯಿಸ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು, ಸ್ಲೇಟ್ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.

ನಂತರ ಶಾಲಾ ಅಭಿವೃದ್ಧಿಗೆ ಶ್ರಮಿಸಿದ ಬಳಂಜ ಗ್ರಾಮ ಪಂಚಾಯತ್‌ ಸದಸ್ಯರಾದ ನಿಜಾಮುದ್ದೀನ್, ಶ್ರೀಮತಿ ಪ್ರಸನ್ನ ಹಾಗೂ ಶ್ರೀಮತಿ ಲೀಲಾವತಿ ಯವರನ್ನು ಶಾಲಾ ಅಭಿವೃದ್ಧಿ ಸಮಿತಿಯ ಪರವಾಗಿ ಸನ್ಮಾನಿಸಲಾಯಿತು.

ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದ ಸಮಸ್ತ ವಿದ್ಯಾಭಿಮಾನಿಗಳಿಗೆ ಕೃತಜ್ಞತೆಗಳನ್ನು ಸಮರ್ಪಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಸಹ ಶಿಕ್ಷಕರಾದ ರಾಜೇಶ್ ರವರು ನಿರೂಪಿಸಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಬೆನೆಡಿಕ್ಟಾ ಪಾಯಿಸ್ ಸ್ವಾಗತಿಸಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ದೇವಿಕಾ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿದ್ಯೇಂದ್ರತೀರ್ಥ ಶ್ರೀಪಾದರ ಭೇಟಿ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಎಕ್ಸೆಲ್ ಗುರುವಾಯನಕೆರೆ ರಾಜ್ಯದಲ್ಲೇ ಅಮೋಘ ಸಾಧನೆ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya
error: Content is protected !!