23.5 C
ಪುತ್ತೂರು, ಬೆಳ್ತಂಗಡಿ
June 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ (ರಿ.) ಬೆಳ್ತಂಗಡಿ ಇದರ ವತಿಯಿಂದ ಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಹತ್ಯಡ್ಕದ ಒಕ್ಕಲಿಗ ಗೌಡ ಸಮಾಜದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರು ಆಸ್ಪತ್ರೆಯ ಬಿಲ್‌ ಪಾವತಿಸಲು ಅಶಕ್ತರಾಗಿದ್ದು, ಈ ಬಗ್ಗೆ ಸೇವಾ ಟ್ರಸ್ಟ್‌ ಗೆ ಮನವಿ ಮಾಡಿದಾಗ ಆ ಕೂಡಲೇ ಸ್ಪಂದಿಸಿ, ಒಕ್ಕಲಿಗ ಸಮುದಾಯದ ಸದಸ್ಯರಿಂದ ಸಂಗ್ರಹಿಸಿದ ಮೊತ್ತವಾದ ರೂ. 30 ಸಾವಿರ ಮೊತ್ತವನ್ನು ಟ್ರಸ್ಟಿನ ಹತ್ತನೇ ಸೇವಾ ಯೋಜನೆ ಅಡಿಯಲ್ಲಿ ಚಿಕಿತ್ಸೆಗೊಳಪಟ್ಟ ಸುಬ್ರಾಯ ಗೌಡ ಹತ್ಯಡ್ಕ ರವರ ಮನೆಗೆ ತೆರಳಿ ಟ್ರಸ್ಟಿನ ಸ್ಥಾಪಕ ಟ್ರಸ್ಟಿಗಳು ಟ್ರಸ್ಟಿನ ಚೆಕ್ಕನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಸ್ಥಾಪಕ ಟ್ರಸ್ಟಿಗಳಾದ ರಂಜನ್ ಜಿ ಗೌಡ, ಶ್ರೀನಿವಾಸ್‌ ಗೌಡ ಬೆಳಾಲು, ಭರತ್ ಗೌಡ ಬಂಗಾಡಿ, ನವೀನ್ ಬಿ.ಕೆ ವಕೀಲರು, ಸೂರಜ್ ಗೌಡ ವಳಂಬ್ರ ಹಾಗೂ ಟ್ರಸ್ಟಿಗಳಾದ ಸುಂದರ ಗೌಡ ಉಡೈರೆ ಮತ್ತು ಧರ್ಮರಾಜ ಗೌಡ ಅಡ್ಕಡಿ ಉಪಸ್ಥಿತರಿದ್ದರು.

Related posts

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya
error: Content is protected !!