July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ (ರಿ.) ಬೆಳ್ತಂಗಡಿ ಇದರ ವತಿಯಿಂದ ಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಹತ್ಯಡ್ಕದ ಒಕ್ಕಲಿಗ ಗೌಡ ಸಮಾಜದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರು ಆಸ್ಪತ್ರೆಯ ಬಿಲ್‌ ಪಾವತಿಸಲು ಅಶಕ್ತರಾಗಿದ್ದು, ಈ ಬಗ್ಗೆ ಸೇವಾ ಟ್ರಸ್ಟ್‌ ಗೆ ಮನವಿ ಮಾಡಿದಾಗ ಆ ಕೂಡಲೇ ಸ್ಪಂದಿಸಿ, ಒಕ್ಕಲಿಗ ಸಮುದಾಯದ ಸದಸ್ಯರಿಂದ ಸಂಗ್ರಹಿಸಿದ ಮೊತ್ತವಾದ ರೂ. 30 ಸಾವಿರ ಮೊತ್ತವನ್ನು ಟ್ರಸ್ಟಿನ ಹತ್ತನೇ ಸೇವಾ ಯೋಜನೆ ಅಡಿಯಲ್ಲಿ ಚಿಕಿತ್ಸೆಗೊಳಪಟ್ಟ ಸುಬ್ರಾಯ ಗೌಡ ಹತ್ಯಡ್ಕ ರವರ ಮನೆಗೆ ತೆರಳಿ ಟ್ರಸ್ಟಿನ ಸ್ಥಾಪಕ ಟ್ರಸ್ಟಿಗಳು ಟ್ರಸ್ಟಿನ ಚೆಕ್ಕನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಸ್ಥಾಪಕ ಟ್ರಸ್ಟಿಗಳಾದ ರಂಜನ್ ಜಿ ಗೌಡ, ಶ್ರೀನಿವಾಸ್‌ ಗೌಡ ಬೆಳಾಲು, ಭರತ್ ಗೌಡ ಬಂಗಾಡಿ, ನವೀನ್ ಬಿ.ಕೆ ವಕೀಲರು, ಸೂರಜ್ ಗೌಡ ವಳಂಬ್ರ ಹಾಗೂ ಟ್ರಸ್ಟಿಗಳಾದ ಸುಂದರ ಗೌಡ ಉಡೈರೆ ಮತ್ತು ಧರ್ಮರಾಜ ಗೌಡ ಅಡ್ಕಡಿ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ಫೆ.13: ಹತ್ಯಡ್ಕ ಪ್ರಾ.ಕೃ.ಪ. ಸ. ಸಂಘದಲ್ಲಿ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

Suddi Udaya

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ: ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!