ಮಡಂತ್ಯಾರು: ಮಡಂತ್ಯಾರು 43ನೇ ವರ್ಷದ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ. ಪಾಂಡವರಕಲ್ಲು ಹಾಗೂ ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ ಮೂರ್ಜೆ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಯೋಗೀಶ್ ಹೆಗ್ಡೆ ಅಚ್ಚಬೆಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂದಿನ ಅವಧಿಗೆ ಹೊಸ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಸಂಜೀವ ಶೆಟ್ಟಿ ಮುಗೆರೋಡಿ, ಉಪಾಧ್ಯಕ್ಷರಾಗಿ ಸುಂದರ ಆಚಾರ್ಯ ಮೂಡಯೂರು, ಜೊತೆ ಕಾರ್ಯದರ್ಶಿಯಾಗಿ ತುಳಸಿ, ಜಿ.ಹಾರಬೆ, ಕೋಶಾಧಿಕಾರಿಯಾಗಿ ಈಶ್ವರ್ ಶೆಟ್ಟಿ ಮೂಡಯೂರು ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.