24.6 C
ಪುತ್ತೂರು, ಬೆಳ್ತಂಗಡಿ
June 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಗಬೇಕು ಆಗಾಗ ಬದುಕಿನೊಳಗೆ’ ತರಬೇತಿ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ನಗಬೇಕು ಆಗಾಗ ಬದುಕಿನೊಳಗೆ ಎಂಬ ವಿಶೇಷವಾದ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪುರಸ್ಕೃತ, ಕಲಾರತ್ನ ವಿಶ್ವನಾಥ ಶೆಟ್ಟಿ ಇವರು ತರಬೇತಿ ಕಾರ್ಯಕ್ರಮವನ್ನು ಸಂಗೀತ ಸಾಹಿತ್ಯದ ಮೂಲಕ ಹಲವು ನಿದರ್ಶನಗಳೊಂದಿಗೆ ನಡೆಸಿಕೊಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂತೋಷ್ ಸಲ್ಡಾನ ಅವರು ಮಾತನಾಡುತ್ತಾ ನಿರಂತರ ಕಾರ್ಯ ಒತ್ತಡದಿಂದಾಗಿ ನಮ್ಮ ಬದುಕಿನಲ್ಲಿ ನಗು ಮಾಯವಾಗುತ್ತಿದೆ ಮತ್ತು ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಇಂತಹ ತರಬೇತಿಗಳು ವಿದ್ಯಾರ್ಥಿಗಳ ಬದುಕಿನಲ್ಲಿ ಪುನಶ್ಚೇತನವನ್ನು ಉಂಟುಮಾಡುತ್ತದೆ ಎಂದು ಹೇಳಿದರು.
ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ ಗಾಯನ ತಮ್ಮ ಅನಿಸಿಕೆಯನ್ನು ತಿಳಿಸಿ, ಪ್ರಶಿಕ್ಷಣಾರ್ಥಿ ಸಾಯಿಧೃತಿ ಹಿನ್ನಲೆ ಸಂಗೀತ ಕೀಬೋರ್ಡ್ ನುಡಿಸಿ, ಸುಬ್ರಹ್ಮಣ್ಯ ರವರು ತಾಂತ್ರಿಕ ಸಹಾಯಕರಾಗಿ ಸಹಕರಿಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ನಾಯಕಿ ವೀಕ್ಷಾದೀಪ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಬಿ.ಎಡ್. ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದ ಮತ್ತು ಪ್ರಥಮ ಹಾಗೂ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಾದ ಶ್ವೇತಾ ಸ್ವಾಗತಿಸಿ, ಸ್ವಾತಿ ವಂದಿಸಿ, ವೈಷ್ಣವಿ ಕಾಯಕ್ರಮವನ್ನು ನಿರೂಪಿಸಿದರು.

Related posts

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ‘ಹದಿಹರೆಯ ಕೌತುಕದ ಸಮಯ’ ಕೃತಿ ಲೋಕಾರ್ಪಣೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

Suddi Udaya
error: Content is protected !!