25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಜೂ.11 ರಂದು ನಡೆದ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರದಲ್ಲಿ ಉದ್ಘಾಟಕರಾಗಿ ಪಾಲ್ಗೊಂಡ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಮಾತನಾಡುತ್ತ, ನಮ್ಮ ದೈಹಿಕ ಕ್ಷಮತೆ ನಮ್ಮ ಮೂಳೆಯ ಮೇಲೆ ಅವಲಂಬಿತವಾಗಿರುತ್ತದೆ. ಸದೃಢವಾದ ಎಲುಬು ಮತ್ತು ಮೂಳೆಗಳಿಂದ ನಮ್ಮ ದೇಹವೂ ಕೂಡ ಸದೃಢವಾಗಿರುತ್ತದೆ. ಅದಕ್ಕಾಗಿ ವರ್ಷಕೊಮ್ಮೆಯಾದರೂ ನಾವು ಇಂಥ ಶಿಬಿರದಲ್ಲಿ ಪಾಲ್ಗೊಂಡು ನಮ್ಮ ಮೂಳೆ ಸಾಂದ್ರತೆಯನ್ನು ಪರೀಕ್ಷಿಸಿ ನಿಖರವಾದ ದೃಢತೆಯನ್ನು ತಿಳಿದು ಏನಾದರೂ ಕೊರತೆಯಿದ್ದಲ್ಲಿ ತಜ್ಞ ವೈದ್ಯರಿಂದ ಸೂಕ್ತ ಪರಿಹಾರ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿ ಈ ಕಾರ್ಯಕ್ರಮದ ಪ್ರಯೋಜನವನ್ನು ಹೆಚ್ಚು ಹೆಚ್ಚಾಗಿ ಪಡೆದುಕೂಳ್ಳಬೇಕೆಂದು ಕರೆ ನೀಡಿದರು.


ಬೆನಕ ಆಸ್ಪತ್ರೆಯ ಎಲುಬು ಕೀಲು ತಜ್ಞರು ಮತ್ತು ಕೈ ಮೈಕ್ರೋಸರ್ಜರಿ ಪರಿಣಿತರಾದ ಡಾ. ರೋಹಿತ್ ಜಿ.ಕೆ. ಯವರು ಮಾತನಾಡುತ್ತ ನಮ್ಮ ಆರೋಗ್ಯದ ಮೇಲೆ ಮೂಳೆ ಸಾಂದ್ರತೆ ಯಾವ ರೀತಿ ಪರಿಣಾಮವನ್ನು ಬೀಳುತ್ತದೆ ಎಂದು ಉದಾಹರಣೆಗಳ ಸಮೇತ ವಿವರಿಸಿದರು. ಮತ್ತು ಎಲುಬು ಮೂಳೆಗಳ ಕಡಿಮೆ ಕ್ಷಮತೆಯಿಂದ ಯಾವ ರೀತಿಯ ಸಮಸ್ಯೆಗಳು ನಮ್ಮ ಶರೀರದ ಮೇಲೆ ಆಗುತ್ತದೆಂದು ವಿವರಣೆ ನೀಡಿದರು.


ಡಾ. ಭಾರತಿ ಜಿ.ಕೆ. ಕಾರ್ಯಕ್ರಮದ ಪ್ರಸ್ತಾವನೆಗೈದು ವಂದಿಸಿದರು. ಆಸ್ಪತ್ರೆಯ ಪಿಆರ್‌ಒ ಎಸ್.ಜಿ. ಭಟ್ ಸ್ವಾಗತಿಸಿ ನಿರೂಪಿಸಿದರು.

Related posts

ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಯುವ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ “ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ”ಪ್ರದಾನ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿ

Suddi Udaya

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

Suddi Udaya

ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ

Suddi Udaya

ಮಾಲಾಡಿಯಲ್ಲಿ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
error: Content is protected !!