25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆಯು ಜೂ.10 ರಂದು ವಲಯದ ಅಧ್ಯಕ್ಷೆ ವಸಂತಿ ಲಕ್ಷ್ಮಣ್ ಇವರ ಅಧ್ಯಕ್ಷತೆಯಲ್ಲಿ ಮಡಂತ್ಯಾರು ಮಹಿಳಾ ಮಂಡಲ ಕಟ್ಟಡದಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಟೈಲರ್ಸ್ ಅಸೋಸಿಯೇಷನ್ ಅಧ್ಯಕ್ಷೆ ವಿದ್ಯಾ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಜಯಂತ್ ಉರ್ಲಾಂಡಿ, ಕ್ಷೇತ್ರ ಸಮಿತಿ ಅಧ್ಯಕ್ಷೆ ವೇದಾವತಿ ಜನಾರ್ಧನ್, ಕಾರ್ಯದರ್ಶಿ ನಾಗೇಶ್, ಜಿಲ್ಲಾ ಉಪಾಧ್ಯಕ್ಷೆ ಶಾಂಭವಿ ಪಿ ಬಂಗೇರ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ ನವೀನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರಾಧ್ಯಕ್ಷರಾಗಿ ಲಿಂಗಪ್ಪ ಟೈಲರ್ ಪುಂಜಾಲಕಟ್ಟೆ, ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್ ಅವರು ಪುನರಾಯ್ಕೆಗೊಂಡರು. ಕಾರ್ಯದರ್ಶಿಯಾಗಿ ಸುಮಲತಾ, ಕೋಶಾಧಿಕಾರಿಯಾಗಿ ಸವಿತಾ, ಉಪಾಧ್ಯಕ್ಷರಾಗಿ ಜಾರಪ್ಪ ಟೈಲರ್ ಬಳ್ಳಮಂಜ, ಹಾಗೂ ಕ್ಷೇತ್ರ ಸಮಿತಿಗೆ ಶಶಿಕಲಾ ಗೋಪಾಲ್ ಪುಂಜಾಲಕಟ್ಟೆ, ಪ್ರಮೀಳಾ ಉಮೇಶ್ ಹಾರಬೆ, ಸಂಗೀತ ಶೆಟ್ಟಿ ಮಡಂತ್ಯಾರು, ಯಶೋಧ ಪೂಂಜಾ, ಆಶಾಲತಾ ಇವರನ್ನು ಆಯ್ಕೆ ಮಾಡಲಾಯಿತು.


ಈ ಸಂದರ್ಭದಲ್ಲಿ ಹೊಸ ಸದಸ್ಯರ ಸೇರ್ಪಡೆ ಸದಸ್ಯರ ಐಡಿ ಕಾರ್ಡ್ ನವೀಕರಣ ಹಾಗೂ ಐಡಿ ಕಾರ್ಡ್ ವಿತರಣೆ ಮಾಡಲಾಯಿತು. ಪ್ರಮೀಳಾ ಉಮೇಶ್ ಕಾರ್ಯಕ್ರಮ ನಿರೂಪಿಸಿ, ಸಂಗೀತ ಶೆಟ್ಟಿ ಸ್ವಾಗತಿಸಿದರು. ಸುಮಲತಾ ಧನ್ಯವಾದ ನೀಡಿದರು. ಕಾರ್ಯಕ್ರಮದ ನಂತರ ಸದಸ್ಯರಿಗೆ ಆಟೋಟ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು.

Related posts

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

Suddi Udaya

ಭಾರತೀಯ ಸಾಂಸ್ಕೃತಿಕ ವಿಕಾಸಕ್ಕಾಗಿ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗಲು ಕ್ಯಾ| ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿಕೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಗುರುವಾಯನಕೆರೆ ವೈಭವ್ ಹಾರ್ಡ್ ವೇರ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya
error: Content is protected !!