September 6, 2026
ತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

ಬೆಳ್ತಂಗಡಿ: ಮಳೆಗಾಲದ ಅವಧಿಯಲ್ಲಿ ಉಂಟಾಗಬಹುದಾದ ವಿಪತ್ತುಗಳ ನಿರ್ವಹಣೆಗಾಗಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ಸಭೆ ನಡೆಸಿ ನೀಡಿರುವ ಆದೇಶದಂತೆ ಗುಡ್ಡ ಜರಿತ ಉಂಟಾಗಬಹುದಾದ ಸ್ಥಳದಲ್ಲಿ ಅಥವಾ ಹೊಳೆ/ತೊರೆ ಬದಿಯಲ್ಲಿರುವ ಮನೆಗಳವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005ರಂತೆ ಗ್ರಾಮ ಪಂಚಾಯತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು ನೋಟೀಸನ್ನು ನೀಡುತ್ತಿದ್ದಾರೆ.
ಅಳದಂಗಡಿ, ಬಾರ್ಯ ಬೆಳಾಲು ಧರ್ಮಸ್ಥಳ ಕಳಿಯ ಕಾಶಿಪಟ್ಣ ಕೊಕ್ಕಡ ಕೊಯ್ಯುರು ಮಚ್ಚಿನ ಮಾಲಾಡಿ ಮಲವಂತಿಗೆ ಮರೋಡಿ ಮುಂಡಾಜೆ ನಾರಾವಿ ಪಡಂಗಡಿ ತೆಕ್ಕಾರು ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈವರೆಗೆ ಸುಮಾರು 190 ಕುಟುಂಬಗಳಿಗೆ ನೋಟೀಸನ್ನು ನೀಡಿ ಅಧಿಕ ಮಳೆಯಾದ ಸಂದರ್ಭದಲ್ಲಿ ತೆರೆಯಲಾಗುವ ಕಾಳಜಿ ಕೇಂದ್ರಗಳಿಗೆ ಅಥವಾ ಸಂಬಂಧಿಕರ ಮನೆಗಳಿಗೆ ತೆರಳುವಂತೆ ಸೂಚಿಸಲಾಗಿದೆ. ನೋಟಿಸು ನೀಡುವ ಕಾರ್ಯ ಮುಂದುವರಿದಿದೆ.
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 6 ಮನೆಗಳಿಗೆ ನೋಟೀಸು ನೀಡಲಾಗಿದೆ.

Related posts

ಪ್ರಾಮಾಣಿಕ ಜನಸೇವೆಗಾಗಿ ಸಹಕಾರ ಸಂಘಗಳು ಕಟಿಬದ್ದರಾಗಬೇಕು; ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಕರೆ

Suddi Udaya

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು,ಮನೆ ಹಸ್ತಾಂತರ

Suddi Udaya
error: Content is protected !!