23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

ಬೆಳ್ತಂಗಡಿ: ಮಳೆಗಾಲದ ಅವಧಿಯಲ್ಲಿ ಉಂಟಾಗಬಹುದಾದ ವಿಪತ್ತುಗಳ ನಿರ್ವಹಣೆಗಾಗಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ಸಭೆ ನಡೆಸಿ ನೀಡಿರುವ ಆದೇಶದಂತೆ ಗುಡ್ಡ ಜರಿತ ಉಂಟಾಗಬಹುದಾದ ಸ್ಥಳದಲ್ಲಿ ಅಥವಾ ಹೊಳೆ/ತೊರೆ ಬದಿಯಲ್ಲಿರುವ ಮನೆಗಳವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005ರಂತೆ ಗ್ರಾಮ ಪಂಚಾಯತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು ನೋಟೀಸನ್ನು ನೀಡುತ್ತಿದ್ದಾರೆ.
ಅಳದಂಗಡಿ, ಬಾರ್ಯ ಬೆಳಾಲು ಧರ್ಮಸ್ಥಳ ಕಳಿಯ ಕಾಶಿಪಟ್ಣ ಕೊಕ್ಕಡ ಕೊಯ್ಯುರು ಮಚ್ಚಿನ ಮಾಲಾಡಿ ಮಲವಂತಿಗೆ ಮರೋಡಿ ಮುಂಡಾಜೆ ನಾರಾವಿ ಪಡಂಗಡಿ ತೆಕ್ಕಾರು ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈವರೆಗೆ ಸುಮಾರು 190 ಕುಟುಂಬಗಳಿಗೆ ನೋಟೀಸನ್ನು ನೀಡಿ ಅಧಿಕ ಮಳೆಯಾದ ಸಂದರ್ಭದಲ್ಲಿ ತೆರೆಯಲಾಗುವ ಕಾಳಜಿ ಕೇಂದ್ರಗಳಿಗೆ ಅಥವಾ ಸಂಬಂಧಿಕರ ಮನೆಗಳಿಗೆ ತೆರಳುವಂತೆ ಸೂಚಿಸಲಾಗಿದೆ. ನೋಟಿಸು ನೀಡುವ ಕಾರ್ಯ ಮುಂದುವರಿದಿದೆ.
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 6 ಮನೆಗಳಿಗೆ ನೋಟೀಸು ನೀಡಲಾಗಿದೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ಜೆಇಇ ಫಲಿತಾಂಶ: ಎಕ್ಸೆಲ್ ಕಾಲೇಜಿಗೆ ಅಖಿಲ ಭಾರತ ರ‍್ಯಾಂಕ್ 57

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya
error: Content is protected !!