March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ (ರಿ.) ಬೆಳ್ತಂಗಡಿ ಇದರ ವತಿಯಿಂದ ಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಹತ್ಯಡ್ಕದ ಒಕ್ಕಲಿಗ ಗೌಡ ಸಮಾಜದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರು ಆಸ್ಪತ್ರೆಯ ಬಿಲ್‌ ಪಾವತಿಸಲು ಅಶಕ್ತರಾಗಿದ್ದು, ಈ ಬಗ್ಗೆ ಸೇವಾ ಟ್ರಸ್ಟ್‌ ಗೆ ಮನವಿ ಮಾಡಿದಾಗ ಆ ಕೂಡಲೇ ಸ್ಪಂದಿಸಿ, ಒಕ್ಕಲಿಗ ಸಮುದಾಯದ ಸದಸ್ಯರಿಂದ ಸಂಗ್ರಹಿಸಿದ ಮೊತ್ತವಾದ ರೂ. 30 ಸಾವಿರ ಮೊತ್ತವನ್ನು ಟ್ರಸ್ಟಿನ ಹತ್ತನೇ ಸೇವಾ ಯೋಜನೆ ಅಡಿಯಲ್ಲಿ ಚಿಕಿತ್ಸೆಗೊಳಪಟ್ಟ ಸುಬ್ರಾಯ ಗೌಡ ಹತ್ಯಡ್ಕ ರವರ ಮನೆಗೆ ತೆರಳಿ ಟ್ರಸ್ಟಿನ ಸ್ಥಾಪಕ ಟ್ರಸ್ಟಿಗಳು ಟ್ರಸ್ಟಿನ ಚೆಕ್ಕನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಸ್ಥಾಪಕ ಟ್ರಸ್ಟಿಗಳಾದ ರಂಜನ್ ಜಿ ಗೌಡ, ಶ್ರೀನಿವಾಸ್‌ ಗೌಡ ಬೆಳಾಲು, ಭರತ್ ಗೌಡ ಬಂಗಾಡಿ, ನವೀನ್ ಬಿ.ಕೆ ವಕೀಲರು, ಸೂರಜ್ ಗೌಡ ವಳಂಬ್ರ ಹಾಗೂ ಟ್ರಸ್ಟಿಗಳಾದ ಸುಂದರ ಗೌಡ ಉಡೈರೆ ಮತ್ತು ಧರ್ಮರಾಜ ಗೌಡ ಅಡ್ಕಡಿ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

Suddi Udaya

ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!