25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ (ರಿ.) ಬೆಳ್ತಂಗಡಿ ಇದರ ವತಿಯಿಂದ ಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಹತ್ಯಡ್ಕದ ಒಕ್ಕಲಿಗ ಗೌಡ ಸಮಾಜದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರು ಆಸ್ಪತ್ರೆಯ ಬಿಲ್‌ ಪಾವತಿಸಲು ಅಶಕ್ತರಾಗಿದ್ದು, ಈ ಬಗ್ಗೆ ಸೇವಾ ಟ್ರಸ್ಟ್‌ ಗೆ ಮನವಿ ಮಾಡಿದಾಗ ಆ ಕೂಡಲೇ ಸ್ಪಂದಿಸಿ, ಒಕ್ಕಲಿಗ ಸಮುದಾಯದ ಸದಸ್ಯರಿಂದ ಸಂಗ್ರಹಿಸಿದ ಮೊತ್ತವಾದ ರೂ. 30 ಸಾವಿರ ಮೊತ್ತವನ್ನು ಟ್ರಸ್ಟಿನ ಹತ್ತನೇ ಸೇವಾ ಯೋಜನೆ ಅಡಿಯಲ್ಲಿ ಚಿಕಿತ್ಸೆಗೊಳಪಟ್ಟ ಸುಬ್ರಾಯ ಗೌಡ ಹತ್ಯಡ್ಕ ರವರ ಮನೆಗೆ ತೆರಳಿ ಟ್ರಸ್ಟಿನ ಸ್ಥಾಪಕ ಟ್ರಸ್ಟಿಗಳು ಟ್ರಸ್ಟಿನ ಚೆಕ್ಕನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಸ್ಥಾಪಕ ಟ್ರಸ್ಟಿಗಳಾದ ರಂಜನ್ ಜಿ ಗೌಡ, ಶ್ರೀನಿವಾಸ್‌ ಗೌಡ ಬೆಳಾಲು, ಭರತ್ ಗೌಡ ಬಂಗಾಡಿ, ನವೀನ್ ಬಿ.ಕೆ ವಕೀಲರು, ಸೂರಜ್ ಗೌಡ ವಳಂಬ್ರ ಹಾಗೂ ಟ್ರಸ್ಟಿಗಳಾದ ಸುಂದರ ಗೌಡ ಉಡೈರೆ ಮತ್ತು ಧರ್ಮರಾಜ ಗೌಡ ಅಡ್ಕಡಿ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ: ‘ಟೆಕ್ನೋ-ಸಾಂಸ್ಕೃತಿಕ ಉತ್ಸವ – 2026’

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!