24.2 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಹತ್ತು ದಿನಗಳ ಯೋಗ ತರಬೇತಿ ಶಿಬಿರ ಜೂ.11ರಂದು ಉದ್ಘಾಟನೆಗೊಂಡಿತು.

ಉಜಿರೆಯ ಶ್ರೀ ಧ.ಮಂ. ನ್ಯಾಚುರೋಪತಿ ಕಾಲೇಜಿನ ಉಪಪ್ರಾಂಶುಪಾಲೆ ಸುಜಾತ ಉದ್ಘಾಟಿಸಿ ಮಾತನಾಡಿ, ಯೋಗವು ಈ ಕ್ಷಣದ ಬದುಕನ್ನು ಮತ್ತು ವರ್ತಮಾನವನ್ನು ಪ್ರತ್ಯಕ್ಷವಾಗಿ ತೋರಿಸಲು ಅತ್ಯುತ್ತಮ ಸಾಧನ ಎಂದರು.

ಶಾಲಾ ಮುಖ್ಯೋಪಾಧ್ಯಾಯ ಕೆ. ಸುರೇಶ್ ಮಾತನಾಡಿ, ಯೋಗ ಮಾನವನ ಬುದ್ಧಿಶಕ್ತಿಯನ್ನು ಹೆಚ್ಚಿಸುತ್ತದೆ. ದಿನನಿತ್ಯದ ಜೀವನ ಶೈಲಿಗೆ ಯೋಗ ಅತ್ಯಗತ್ಯ ಎಂದರು.

ಯೋಗ ತರಬೇತುದಾರರು, ಶ್ರೀ ಧ.ಮಂ. ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿಗಳಾದ ಕ್ಷಮಾ ಮತ್ತು ಅಮೃತವರ್ಷಿಣಿ, ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಿಕ್ಷಕರಾದ ಚಂದ್ರಶೇಖರ ಸ್ವಾಗತಿಸಿ, ಅರ್ಚನಾ ವಂದಿಸಿ, ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!