July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಹತ್ತು ದಿನಗಳ ಯೋಗ ತರಬೇತಿ ಶಿಬಿರ ಜೂ.11ರಂದು ಉದ್ಘಾಟನೆಗೊಂಡಿತು.

ಉಜಿರೆಯ ಶ್ರೀ ಧ.ಮಂ. ನ್ಯಾಚುರೋಪತಿ ಕಾಲೇಜಿನ ಉಪಪ್ರಾಂಶುಪಾಲೆ ಸುಜಾತ ಉದ್ಘಾಟಿಸಿ ಮಾತನಾಡಿ, ಯೋಗವು ಈ ಕ್ಷಣದ ಬದುಕನ್ನು ಮತ್ತು ವರ್ತಮಾನವನ್ನು ಪ್ರತ್ಯಕ್ಷವಾಗಿ ತೋರಿಸಲು ಅತ್ಯುತ್ತಮ ಸಾಧನ ಎಂದರು.

ಶಾಲಾ ಮುಖ್ಯೋಪಾಧ್ಯಾಯ ಕೆ. ಸುರೇಶ್ ಮಾತನಾಡಿ, ಯೋಗ ಮಾನವನ ಬುದ್ಧಿಶಕ್ತಿಯನ್ನು ಹೆಚ್ಚಿಸುತ್ತದೆ. ದಿನನಿತ್ಯದ ಜೀವನ ಶೈಲಿಗೆ ಯೋಗ ಅತ್ಯಗತ್ಯ ಎಂದರು.

ಯೋಗ ತರಬೇತುದಾರರು, ಶ್ರೀ ಧ.ಮಂ. ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿಗಳಾದ ಕ್ಷಮಾ ಮತ್ತು ಅಮೃತವರ್ಷಿಣಿ, ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಿಕ್ಷಕರಾದ ಚಂದ್ರಶೇಖರ ಸ್ವಾಗತಿಸಿ, ಅರ್ಚನಾ ವಂದಿಸಿ, ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಯಾತ್ರಿ ನಿವಾಸ: ನ. 23 ರಂದು ಯಾತ್ರಿ ನಿವಾಸದ ಶಿಲಾನ್ಯಾಸ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ

Suddi Udaya
error: Content is protected !!