September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಆದೇಶದಂತೆ ನಿನ್ನೆ ಮತ್ತು ಇಂದು ತಾಲೂಕಿನ 42 ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು ಮಳೆಗಾಲದ ಅವಧಿಯಲ್ಲಿ ಉಂಟಾಗಬಹುದಾದ ಗುಡ್ಡ ಜರಿತ ಸ್ಥಳಗಳಲ್ಲಿ ಮತ್ತು ಹೊಳೆ/ತೊರೆ ಬದಿಯಲ್ಲಿರುವ 432 ಮನೆಗಳವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005ರಂತೆ ನೋಟೀಸನ್ನು ಖುದ್ದಾಗಿ ಜಾರಿಗೊಳಿಸಿದರು.

ಅಧಿಕ ಮಳೆಯಾದ ಸಂದರ್ಭದಲ್ಲಿ ತೆರೆಯಲಾಗುವ ಕಾಳಜಿ ಕೇಂದ್ರಗಳಿಗೆ ಅಥವಾ ಸಂಬಂಧಿಕರ ಮನೆಗಳಿಗೆ ತೆರಳುವಂತೆ ನೋಟಿಸಿನಲ್ಲಿ ಸೂಚಿಸಲಾಗಿದೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 6 ಮನೆಗಳಿಗೆ ನೋಟೀಸು ನೀಡಲಾಗಿದ್ದು ತಾಲೂಕಿನಲ್ಲಿ ಒಟ್ಟು 438 ಮನೆಗಳಿಗೆ ನೋಟೀಸು ನೀಡಲಾಗಿದೆ.


ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಇನ್ಸಿಡೆಂಟ್ ಕಮಾಂಡರ್ ಆಗಿ ನೇಮಕ ಮಾಡಲಾಗಿದ್ದು ಮಳೆಗಾಲದ ಅವಧಿಯಲ್ಲಿ ದಿನದ ಇಪ್ಪತ್ತನಾಲ್ಕು ಗಂಟೆಯೂ ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆ ಗಾಳಿಯಿಂದ ಉಂಟಾಗಬಹುದಾದ ವಿಪತ್ತುಗಳ ಬಗ್ಗೆ ತೀವ್ರ ನಿಗಾ ವಹಿಸಿ ಆಕಸ್ಮಿಕ ಅವಗಢಗಳು ಉಂಟಾದಾಗ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯತೆಯೊಂದಿಗೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

Related posts

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya
error: Content is protected !!