24.2 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ 2025ರ ಸಾಲಿನಲ್ಲಿ ತರಬೇತಿ ಪಡೆದು ತೇರ್ಗಡೆಯಾಗುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ರಾಷ್ಟ್ರೀಯ, ಬಹುರಾಷ್ಟ್ರೀಯ ಕಂಪನಿಗಳಿಂದ ಆಯ್ಕೆ ಸಂದರ್ಶನಗಳನ್ನು ನಡೆಸಲಾಯಿತು.

ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿಗಳಾದ ಟೊಯೋಟೊ ಕಿರ್ಲೋಸ್ಕರ್ ಮೋಟರ್ಸ್, ಟೊಯೋಟಾ ಕಿರ್ಲೋಸ್ಕರ್ ಆಟೋ ಪಾರ್ಟ್ಸ್, ಎಲ್ ಅಂಡ್ ಟಿ, ಇಶಾರ್ ಮೋಟಾರ್ಸ್, ಕಿರ್ಲೋಸ್ಕರ್ ಟೋಯೋಡಾ ಟೆಕ್ಸ್ಟೈಲ್ಸ್ ಮೆಷಿನರಿಸ್, ಬಾಷ್, ಸಸ್ಮೋಸ್, ಅದ್ವೆöತ್ ಹುಂಡೈ, ಟ್ರೆöಡೆಂಟ್ ಗ್ರೂಫ್ಸ್, ಟಾಟಾ ಅರವಿಂದ್ ಮೋಟಾರ್ಸ್, ಭಾರತ್ ಅಟೋ ಕಾರ್ಸ್, ಭವಾನಿ ಇಂಡಸ್ಟ್ರಿಸ್ ಮುಂತಾದ ಖ್ಯಾತನಾಮ ಕೈಗಾರಿಕಾ ಸಂಸ್ಥೆಗಳಿಂದ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಆಸುಪಾಸಿನ ಹಲವಾರು ಐಟಿಐ ಸಂಸ್ಥೆಗಳ ವಿದ್ಯಾರ್ಥಿ, ವಿದ್ಯಾರ್ಥಿನಿರೂ ಈ ವ್ಯವಸ್ಥೆಯ ಸದುಪಯೋಗವನ್ನು ಪಡೆದುಕೊಂಡಿದ್ದು ಐಟಿಐ ತರಬೇತಿ ಪಡೆಯುತ್ತಿರುವ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ನೇಮಕಾತಿಯ ಅವಕಾಶವನ್ನು ಪಡೆದಿದ್ದು ತಮ್ಮ ಮುಂದಿನ ಭವಿಷ್ಯದ ಬಗ್ಗೆ ಚಿಂತಿಸುವ ಅಗತ್ಯವೇ ಇಲ್ಲದಂತಾಗಿದ್ದು ಭದ್ರ ಭವಿಷ್ಯವನ್ನು ರೂಪಿಸಿಕೊಳ್ಳಲು ಅವಕಾಶ ಪ್ರಾಪ್ತಿಯಾಗಿದೆ.

ವೇಣೂರು ಐಟಿಐಯ ಎಲ್ಲಾ ತರಬೇತಿದಾರರಿಗೆ ಮಾತ್ರವಲ್ಲದೆ ಸುತ್ತಮುತ್ತಲಿನ ಐಟಿಐಗಳ 600ಕ್ಕೂ ಹೆಚ್ಚಿನ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಇದರ ಪ್ರಯೋಜನ ಪಡೆಯುವಂತಾಗಿದೆ ಎಂದು ವೇಣೂರು ಐಟಿಐನ ಪ್ರಾಚಾರ್ಯರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Related posts

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya
error: Content is protected !!