30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ 2025ರ ಸಾಲಿನಲ್ಲಿ ತರಬೇತಿ ಪಡೆದು ತೇರ್ಗಡೆಯಾಗುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ರಾಷ್ಟ್ರೀಯ, ಬಹುರಾಷ್ಟ್ರೀಯ ಕಂಪನಿಗಳಿಂದ ಆಯ್ಕೆ ಸಂದರ್ಶನಗಳನ್ನು ನಡೆಸಲಾಯಿತು.

ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿಗಳಾದ ಟೊಯೋಟೊ ಕಿರ್ಲೋಸ್ಕರ್ ಮೋಟರ್ಸ್, ಟೊಯೋಟಾ ಕಿರ್ಲೋಸ್ಕರ್ ಆಟೋ ಪಾರ್ಟ್ಸ್, ಎಲ್ ಅಂಡ್ ಟಿ, ಇಶಾರ್ ಮೋಟಾರ್ಸ್, ಕಿರ್ಲೋಸ್ಕರ್ ಟೋಯೋಡಾ ಟೆಕ್ಸ್ಟೈಲ್ಸ್ ಮೆಷಿನರಿಸ್, ಬಾಷ್, ಸಸ್ಮೋಸ್, ಅದ್ವೆöತ್ ಹುಂಡೈ, ಟ್ರೆöಡೆಂಟ್ ಗ್ರೂಫ್ಸ್, ಟಾಟಾ ಅರವಿಂದ್ ಮೋಟಾರ್ಸ್, ಭಾರತ್ ಅಟೋ ಕಾರ್ಸ್, ಭವಾನಿ ಇಂಡಸ್ಟ್ರಿಸ್ ಮುಂತಾದ ಖ್ಯಾತನಾಮ ಕೈಗಾರಿಕಾ ಸಂಸ್ಥೆಗಳಿಂದ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಆಸುಪಾಸಿನ ಹಲವಾರು ಐಟಿಐ ಸಂಸ್ಥೆಗಳ ವಿದ್ಯಾರ್ಥಿ, ವಿದ್ಯಾರ್ಥಿನಿರೂ ಈ ವ್ಯವಸ್ಥೆಯ ಸದುಪಯೋಗವನ್ನು ಪಡೆದುಕೊಂಡಿದ್ದು ಐಟಿಐ ತರಬೇತಿ ಪಡೆಯುತ್ತಿರುವ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ನೇಮಕಾತಿಯ ಅವಕಾಶವನ್ನು ಪಡೆದಿದ್ದು ತಮ್ಮ ಮುಂದಿನ ಭವಿಷ್ಯದ ಬಗ್ಗೆ ಚಿಂತಿಸುವ ಅಗತ್ಯವೇ ಇಲ್ಲದಂತಾಗಿದ್ದು ಭದ್ರ ಭವಿಷ್ಯವನ್ನು ರೂಪಿಸಿಕೊಳ್ಳಲು ಅವಕಾಶ ಪ್ರಾಪ್ತಿಯಾಗಿದೆ.

ವೇಣೂರು ಐಟಿಐಯ ಎಲ್ಲಾ ತರಬೇತಿದಾರರಿಗೆ ಮಾತ್ರವಲ್ಲದೆ ಸುತ್ತಮುತ್ತಲಿನ ಐಟಿಐಗಳ 600ಕ್ಕೂ ಹೆಚ್ಚಿನ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಇದರ ಪ್ರಯೋಜನ ಪಡೆಯುವಂತಾಗಿದೆ ಎಂದು ವೇಣೂರು ಐಟಿಐನ ಪ್ರಾಚಾರ್ಯರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Related posts

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya
error: Content is protected !!