September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನವು ಜೂ.11 ರಂದು ವಿಶ್ವನಾಥ ಪೂಜಾರಿ ಮೈರಬೆಟ್ಟು ಇವರ ಮನೆಯಲ್ಲಿ ಜರಗಿತು.

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ದ. ಕ. ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕರು ಪ್ರಭಾಕರ್ ಎಚ್. ದೀಪ ಬೆಳಗಿಸಿ ಚಾಲನೆ ನೀಡಿದರು. ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಪ್ರತಾಪ್ ಶೆಟ್ಟಿ ಕುಂಡಾಜೆ, ನಿರ್ದೇಶಕರಾದ ಕೃಷ್ಣ ಶೆಟ್ಟಿ ಉಮಾನೊಟ್ಟು, ದಿನೇಶ್ ಹುಲಿಮೇರು, ಉಮೇಶ್ ಶೆಟ್ಟಿ ಪಾಲ್ಯ, ಕೇಶವ ಶೆಟ್ಟಿ, ಸುಮಿತ್ರಾ ಶೆಟ್ಟಿ ಹಾಗೂ ವೇಣೂರು ಪಶು ಸಂಗೋಪನಾ ಇಲಾಖೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ಪ್ರದೀಪ್ ಪಾಣಿಮೇರು ಸ್ವಾಗತಿಸಿದರು. ನಂತರ ಆರಂಬೋಡಿ ಗ್ರಾಮ ವ್ಯಾಪ್ತಿಯ ಎಲ್ಲಾ ರಾಸುಗಳಿಗೆ ಚರ್ಮಗಂಟು ಮತ್ತು ಕಾಲುಬಾಯಿ ರೋಗದ ಲಸಿಕೆ ನೀಡಲಾಯಿತು.

Related posts

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಡ್ರಗ್ಸ್ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ನೃತ್ಯ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

Suddi Udaya

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!